February 25, 2026

Newsnap Kannada

The World at your finger tips!

dks

ಯಾರೂ ಹದ್ದುಮೀರಿ ಹೋಗಬೇಡಿ‌: ಜಮೀರ್​ಗೆ ವಾರ್ನಿಂಗ್​ ನೀಡಿದ ಡಿಕೆಶಿ

Spread the love

ಪದೇ ಪದೇ ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಯಕ ಜಮೀರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಡಕ್ ವಾರ್ನಿಂಗ್ ಮಾಡಿದ್ದಾರೆ

ಸುದ್ದಿಗಾರರ ಜೊತೆ ಮಾತನಾಡಿದ ಡಿಕೆಶಿ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಇಲ್ಲಿ ಇದ್ದೇನೆ..ನಮ್ಮ ಡ್ಯೂಟಿ ಚೀಫ್ ಮಿನಿಸ್ಟರ್ ಆಗುವುದಲ್ಲ ಎಂದು ಜಮೀರ್​ಗೆ ಟಾಂಗ್ ನೀಡಿದರು.

ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದೇ ಕೆಲಸ. ಕಾಂಗ್ರೆಸ್ ಸಂಘಟಿತ ನಾಯಕತ್ವದಲ್ಲಿ ಚುನಾವಣೆ ಎದುರಿಸಲಿದೆ. ಯಾರೇ ಲೀಡರ್​ಗೂ ಆಸೆ ಆಕಾಂಕ್ಷೆಗಳು ಇರಬಹುದು. ಸಿದ್ದರಾಮಯ್ಯಗೂ ಅಭಿಮಾನ ಇರುತ್ತೆ, ಅಭಿಮಾನಿಗಳು ಇರುತ್ತಾರೆ ಇದ್ದಾರೆ

ಅದರಂತೆ ನಾನು, ಮಲ್ಲಿಕಾರ್ಜುನ ಖರ್ಗೆ ಇಲ್ಲವೇ ಪರಮೇಶ್ವರ್ ಇರಬಹುದು. ಎಲ್ಲರಿಗೂ ಆಸೆ, ‌ಆಕಾಂಕ್ಷೆಗಳು ಇರುತ್ತೆ. ಯಾರೂ ಹದ್ದು ಮೀರಿ ಹೋಗಬಾರದು ಅಂತ ಈಗಾಗಲೇ ಹೇಳಿದ್ದೇವೆ. ಹೈಕಮಾಂಡ್ ಕೂಡ ಹೇಳಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಮೀರ್​ಗೆ ವಾರ್ನಿಂಗ್​ ಕೊಟ್ಟಿದ್ದಾರೆ.

error: Content is protected !!