ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಕಾರ್ಯವೈಖರಿಯ ಬಗ್ಗೆ ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪ ಮತ್ತೆ ಅಸಮಧಾನ ವ್ಯಕ್ತಪಡಿಸಿದ್ದಾರೆ.
ರೂಪ ಸಾಮಾಜಿಕ ಜಾಲತಾಣದಲ್ಲಿ ರೋಹಿಣಿ ಸಿಂಧೂರಿ ಮೈಸೂರಿನಲ್ಲಿ ಡಿಸಿಯಾಗಿದ್ದ 10 ತಿಂಗಳು ಸಮಯದಲ್ಲಿ ಒಂದೇ ಒಂದು ಇಂಚು ಭೂಮಿಯನ್ನು ವಶಪಡಿಸಿಕೊಳ್ಳಲು ಆಗಲಿಲ್ಲ ಎಂದು ಟ್ವಿಟರ್ ನಲ್ಲಿ ವ್ಯಂಗ್ಯವಾಡಿದ್ದಾರೆ.
ಮೈಸೂರಿನ ಡಿಸಿಯಾಗಿದ್ದ ರೋಹಿಣಿ ಸಿಂಧೂರಿ ಹತ್ತು ತಿಂಗಳ ಅವಧಿಯಲ್ಲಿ ಒಂದು ಇಂಚು ಭೂಮಿಯನ್ನು ಕೂಡ ಭೂ ಮಾಫಿಯದಿಂದ ಪಡೆದುಕೊಳ್ಳಲಿಲ್ಲ. ಒತ್ತುವರಿ ಮಾಡಿದ್ದ ಭೂಗಳ್ಳರ ವಿರುದ್ಧ ಕಾನೂನಾತ್ಮಕವಾಗಿ ಕ್ರಮಕೈಗೊಳ್ಳಲಿಲ್ಲ. ಮೈಸೂರಿನಲ್ಲಿ ಆಗಿದ್ದಂತಹ ಭೂ ಮಾಫಿಯದ ವಿಚಾರದಲ್ಲಿ ಮೈಸೂರು ಡಿಸಿಯಾಗಿದ್ದ ರೋಹಿಣಿ ಸಿಂಧೂರಿ ಏನೂ ಮಾಡಲಿಲ್ಲ. ರೋಹಿಣಿ ಸಿಂಧೂರಿ ತೋಳ ಬಂತು ತೋಳ ಕಥೆ ಹೇಳಿಕೊಂಡು ಕಾಲ ಕಳೆದ್ರೆ ವಿನಃ ತೋಳ ಹಿಡಿಯುವ ಕೆಲಸ ಆಗಲೇ ಇಲ್ಲ ಎಂದು ಹೇಳಿದ್ದಾರೆ.
ಸ್ವಿಮ್ಮಿಂಗ್ ಪೂಲ್ ವಿಚಾರ ಸಣ್ಣದಾಗಿದ್ದರೂ ಅದನ್ನು ಮಾಡಲು ಅನುಮತಿ ಪಡೆದಿಲ್ಲಾ ಅನ್ನೋದು ಮೈಸೂರು ವಿಭಾಗೀಯ ಕಮೀಷನರ್ ವರದಿಯಲ್ಲಿ ಬಹಿರಂಗವಾಗಿದೆ. ಅಕ್ರಮ ಯಾರೇ ಮಾಡಿದರು ಅಕ್ರಮನೇ ಭೂಮಾಫಿಯಾ ಸೇರಿದಂತೆ ಹಲವು ಪ್ರಕರಣಗಳಲ್ಲಿ ಇನ್ನು ಕ್ರಮ ಆಗಿಲ್ಲ, ಅಗತ್ಯ ಆಗಬೇಕು ಎಂದು ಒತ್ತಾಯಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ