ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಕಾರ್ಯವೈಖರಿಯ ಬಗ್ಗೆ ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪ ಮತ್ತೆ ಅಸಮಧಾನ ವ್ಯಕ್ತಪಡಿಸಿದ್ದಾರೆ.
ರೂಪ ಸಾಮಾಜಿಕ ಜಾಲತಾಣದಲ್ಲಿ ರೋಹಿಣಿ ಸಿಂಧೂರಿ ಮೈಸೂರಿನಲ್ಲಿ ಡಿಸಿಯಾಗಿದ್ದ 10 ತಿಂಗಳು ಸಮಯದಲ್ಲಿ ಒಂದೇ ಒಂದು ಇಂಚು ಭೂಮಿಯನ್ನು ವಶಪಡಿಸಿಕೊಳ್ಳಲು ಆಗಲಿಲ್ಲ ಎಂದು ಟ್ವಿಟರ್ ನಲ್ಲಿ ವ್ಯಂಗ್ಯವಾಡಿದ್ದಾರೆ.
ಮೈಸೂರಿನ ಡಿಸಿಯಾಗಿದ್ದ ರೋಹಿಣಿ ಸಿಂಧೂರಿ ಹತ್ತು ತಿಂಗಳ ಅವಧಿಯಲ್ಲಿ ಒಂದು ಇಂಚು ಭೂಮಿಯನ್ನು ಕೂಡ ಭೂ ಮಾಫಿಯದಿಂದ ಪಡೆದುಕೊಳ್ಳಲಿಲ್ಲ. ಒತ್ತುವರಿ ಮಾಡಿದ್ದ ಭೂಗಳ್ಳರ ವಿರುದ್ಧ ಕಾನೂನಾತ್ಮಕವಾಗಿ ಕ್ರಮಕೈಗೊಳ್ಳಲಿಲ್ಲ. ಮೈಸೂರಿನಲ್ಲಿ ಆಗಿದ್ದಂತಹ ಭೂ ಮಾಫಿಯದ ವಿಚಾರದಲ್ಲಿ ಮೈಸೂರು ಡಿಸಿಯಾಗಿದ್ದ ರೋಹಿಣಿ ಸಿಂಧೂರಿ ಏನೂ ಮಾಡಲಿಲ್ಲ. ರೋಹಿಣಿ ಸಿಂಧೂರಿ ತೋಳ ಬಂತು ತೋಳ ಕಥೆ ಹೇಳಿಕೊಂಡು ಕಾಲ ಕಳೆದ್ರೆ ವಿನಃ ತೋಳ ಹಿಡಿಯುವ ಕೆಲಸ ಆಗಲೇ ಇಲ್ಲ ಎಂದು ಹೇಳಿದ್ದಾರೆ.
ಸ್ವಿಮ್ಮಿಂಗ್ ಪೂಲ್ ವಿಚಾರ ಸಣ್ಣದಾಗಿದ್ದರೂ ಅದನ್ನು ಮಾಡಲು ಅನುಮತಿ ಪಡೆದಿಲ್ಲಾ ಅನ್ನೋದು ಮೈಸೂರು ವಿಭಾಗೀಯ ಕಮೀಷನರ್ ವರದಿಯಲ್ಲಿ ಬಹಿರಂಗವಾಗಿದೆ. ಅಕ್ರಮ ಯಾರೇ ಮಾಡಿದರು ಅಕ್ರಮನೇ ಭೂಮಾಫಿಯಾ ಸೇರಿದಂತೆ ಹಲವು ಪ್ರಕರಣಗಳಲ್ಲಿ ಇನ್ನು ಕ್ರಮ ಆಗಿಲ್ಲ, ಅಗತ್ಯ ಆಗಬೇಕು ಎಂದು ಒತ್ತಾಯಿಸಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ