February 25, 2026

Newsnap Kannada

The World at your finger tips!

yediyurappa

ಕೋವಿಡ್ ಗೆ ಬಲಿ: ಪತ್ರಕರ್ತರಿಬ್ಬರ ಕುಟುಂಬಕ್ಕೆ ತಲಾ 5 ಲಕ್ಷ ರು.‌ ಮಂಜೂರು ಮಾಡಿದ ಸಿಎಂ ಯಡಿಯೂರಪ್ಪ

Spread the love

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ)ದ ಮನವಿ ಮೇರೆಗೆ, ಇತ್ತೀಚೆಗೆ ಕೋವಿಡ್ ಗೆ ಬಲಿಯಾಗಿದ್ದ ಚಿತ್ರದುರ್ಗ ಕ್ಯಾಮರಾಮೆನ್ ಬಸವರಾಜ ಕೋಟಿ ಮತ್ತು ಚನ್ನರಾಯಪಟ್ಟಣ ತಾಲ್ಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಮತ್ತು ಹಿರಿಯ ಪತ್ರಕರ್ತ ಸ್ವಾಮಿಗೌಡ ಅವರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಜೂರು ಮಾಡಿದ್ದಾರೆ.

ಬಸವರಾಜ ಕೋಟಿ ಅವರಿಗೆ ಪರಿಹಾರ ನೀಡುವಂತೆ ಚಿತ್ರದುರ್ಗ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಸ್ವಾಮಿಗೌಡ ಅವರಿಗೆ ಪರಿಹಾರ ಮಂಜೂರು ಮಾಡುವಂತೆ ಚನ್ನರಾಯಪಟ್ಟಣ ತಾಲ್ಲೂಕು ಮತ್ತು ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘಗಳು, ರಾಜ್ಯ ಸಂಘಕ್ಕೆ ಮನವಿ ಮಾಡಿದ್ದವು.

ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಮನವಿ ಪರಿಗಣಿಸಿ ಪರಿಹಾರ ಮಂಜೂರು ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಂಘ ಅಭಿನಂದನೆ ಸಲ್ಲಿಸಿದೆ.

error: Content is protected !!