ಇಂದು ಆಷಾಢ ಅಮಾವಾಸ್ಯೆ, ಶುಕ್ರವಾರ – ಚಾಮುಂಡಿ ತಾಯಿಯ ದರ್ಶನದ ಅವಕಾಶವಿಲ್ಲ‌

Team Newsnap
1 Min Read

ಇಂದು ಆಷಾಢದ ಮೊದಲ ಶುಕ್ರವಾರ ಹಾಗೂ ಅಮಾವಾಸ್ಯೆಯೂ ಆಗಿದೆ. ಎರಡೂವರೆ ತಿಂಗಳ ಬಳಿಕ ಇದೇ ಸೋಮವಾರದಿಂದ ದೇವಸ್ಥಾನದ ಪ್ರವೇಶ ಹಾಗೂ ದರ್ಶನಕ್ಕೆ ಅವಕಾಶ ಕೊಡಲಾಗಿದೆ.

ಅಷಾಢದ ಮೊದಲ ಶುಕ್ರವಾರ ಮತ್ತು ಅಮಾವಾಸ್ಯೆಯಲ್ಲಿ ಪೂಜೆ ಸಲ್ಲಿಸುವುದಕ್ಕೆ ಭಕ್ತರ ದಂಡೇ ಬರುತ್ತಿದೆ.

ಆದರೆ ಮೈಸೂರಿನ ಚಾಮುಂಡೇಶ್ವರಿಯ ದರ್ಶನಕ್ಕೆ ಅವಕಾಶ ಇಲ್ಲ.ಕೇಂದ್ರ, ರಾಜ್ಯ ಸರ್ಕಾರದ ಶಿಷ್ಟಾಚಾರ ವ್ಯಾಪ್ತಿಯ ಜನಪ್ರತಿನಿಧಿಗಳಿಗೆ, ಕರ್ತವ್ಯ ನಿರತ ಅಧಿಕಾರಿಗಳಿಗೆ ಮಾತ್ರ ಬೆಟ್ಟಕ್ಕೆ ಪ್ರವೇಶ ಅವಕಾಶವಿದೆ.

ಭಕ್ತರು ಭಾರಿ ಸಂಖ್ಯೆಯಲ್ಲಿ ಬರಬಹುದು ಎಂಬ ಕಾರಣಕ್ಕೆ ಇಂದು ಭಕ್ತರ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಉಳಿದಂತೆ ರಾಜ್ಯದ ಉಳಿದ ದೇವಸ್ಥಾನಗಳಲ್ಲಿ ಭಕ್ತರು ಬೆಳಗ್ಗೆಯೇ ದೇವಸ್ಥಾನಗಳಿಗೆ ಬರುತ್ತಿದ್ದಾರೆ.

ಬೆಂಗಳೂರಿನ ಬನಶಂಕರಿ ಮತ್ತು ಅಣ್ಣಮ ದೇವಸ್ಥಾನಗಳಲ್ಲಿ ಭಕ್ತರು ದರ್ಶನ ಪಡೆಯುತ್ತಿದ್ದಾರೆ.

Share This Article
Leave a comment