ರಾಜಕಾರಣಿಗಳ ತಿಕ್ಕಲುತನ,
ಮಾಧ್ಯಮಗಳ ಬೆಂಕಿ ಹಚ್ಚುವಿಕೆ,
ಕೋವಿಡ್ ನಂತರವೂ ಪಾಠ ಕಲಿಯದ ಜನ ಪ್ರತಿನಿಧಿಗಳು……..
ಜೀವ ಜೀವನದ ಮಧ್ಯೆ ಸಾಮಾನ್ಯ ಜನ ಒದ್ದಾಡುತ್ತಿರುವಾಗ, ಲಾಕ್ ಡೌನ್ ಕಾರಣದಿಂದಾಗಿ ಸುಮಾರು 16 ತಿಂಗಳಿನಿಂದ ಇಡೀ ಅರ್ಥ ವ್ಯವಸ್ಥೆ ಕುಸಿದು ದಿಕ್ಕಾಪಾಲಾಗಿರುವಾಗ ಅದಕ್ಕೆ ಒಂದಷ್ಟು ಪರಿಹಾರ ಸೂತ್ರಗಳನ್ನು ರೂಪಿಸಲು ಪ್ರಯತ್ನಿಸದೆ ರಾಜಕಾರಣಿಗಳು ತಮ್ಮ ವೈಯಕ್ತಿಕ ತೆವಲುಗಳಿಗಾಗಿ ಒಬ್ಬೊರ ಮೇಲೊಬ್ಬರ ಕೆಸರೆರಚಾಟ ಮಾಧ್ಯಮಗಳ ಮಂಗನಾಟ ಇದೆಲ್ಲಾ ಏನನ್ನು ಸೂಚಿಸುತ್ತದೆ.
ಎಂತಹ ಅತ್ಯಂತ ಕೆಟ್ಟ ಕೊಳಕ ರಾಜಕೀಯ ವ್ಯವಸ್ಥೆಯಲ್ಲಿ ನಾವು ಬದುಕುತ್ತಿದ್ದೇವೆ ಮತ್ತು ಅದಕ್ಕೆ ಜೀವಂತ ಸಾಕ್ಷಿಯಾಗಿದ್ದೇವೆ ಎಂಬುದೇ ನಮ್ಮ ನೈತಿಕತೆ ಮತ್ತು ಆತ್ಮವಿಶ್ವಾಸ ಕುಸಿಯುವಂತೆ ಮಾಡುತ್ತಿದೆ.
ಛೆ…. ಏನೂ ಮಾಡಲು ಸಾಧ್ಯವಾಗುತ್ತಿಲ್ಲ…….
ಥೂ ಥೂ ಥೂ,
ಇವರೇನು ಜನ ಪ್ರತಿನಿಧಿಗಳೋ ಅಥವಾ ರೇಸು ಕುದುರೆಗಳೋ…………..
ದಿನದ 24 ಗಂಟೆ ಕೆಲಸ ಮಾಡಿದರೂ ಮುಗಿಯದಷ್ಟು ಸಮಸ್ಯೆಗಳು ತುಂಬಿ ತುಳುಕುತ್ತಿದ್ದರೂ,
7 ಕೋಟಿ ಜನರಲ್ಲಿ ಕೇವಲ ಕೆಲವೇ ಜನರಿಗೆ ಮಾತ್ರ ಸಿಗಬಹುದಾದ ಅತ್ಯುತ್ತಮ ಸ್ಥಾನ ದೊರೆತಿದ್ದರೂ ಇನ್ನೂ ಹಣ ಅಧಿಕಾರ ದುರಹಂಕಾರಕ್ಕೆ ಬಲಿಯಾಗುತ್ತಿದ್ದಾರಲ್ಲ ಇವರಿಗೆ ಏನು ಮಾಡುವುದು.
ಇವರನ್ನು ಮರೆತು ನೆಮ್ಮದಿಯಾಗಿ ಇರೋಣವೆಂದರೆ………
ಆಸ್ಪತ್ರೆಗಳ ಅವ್ಯವಸ್ಥೆ ಕಂಡಾಗ ಇವರು ನೆನಪಾಗುತ್ತಾರೆ.
ಶಾಲೆಯಲ್ಲಿ ಮಕ್ಕಳ ವಿದ್ಯಾಭ್ಯಾಸ ಮತ್ತು ಅದರ ಖರ್ಚು ನೆನಪಾದಾಗ ಇವರೇ ಕಾಡುತ್ತಾರೆ.
ಬಸ್ ರೈಲು ನಿಲ್ದಾಣದ ಆ ಕೆಟ್ಟ ದೃಶ್ಯಗಳನ್ನು ನೋಡಿದಾಗಲೂ ಇವರೇ ನೆನಪಾಗುತ್ತಾರೆ.
ರಸ್ತೆಯ ಆ ಧೂಳು ಆ ವಾಹನ ಭರಾಟೆಗಳನ್ನು ಕಂಡಾಗ ನೆನಪಾಗುವುದೇ ಇವರು.
ಆಹಾರದಲ್ಲಿ ಕಲಬೆರಕೆ ವಾಸನೆ ಮೂಡಿದಾಗಲೂ ಇವರೇ ನೆನಪಾಗುತ್ತಾರೆ.
ಪ್ರಕೃತಿಯ ವಿಕೋಪದ ಅನಾಹುತಗಳಲ್ಲಿಯೂ ಇವರದೇ ನೆನಪು.
ವಿದ್ಯುತ್ – ನೀರಿನ ಸಮಸ್ಯೆಗಳು ತಲೆದೋರಿದಾಗಲೂ ಇವರೇ ಕಾಡುತ್ತಾರೆ.
ನಮ್ಮ ಮಕ್ಕಳ ಭವಿಷ್ಯ ನೆನಪಾದಾಗಲೂ ಇವರೇ ಕಾಡುತ್ತಾರೆ.
ಒಟ್ಟಿನಲ್ಲಿ ನಮ್ಮ ಇಡೀ ಬದುಕನ್ನು ನಿಯಂತ್ರಿಸುವುದೇ ಇವರು.
ಈ ಜನ ಪ್ರತಿನಿಧಿಗಳ ಗುಣಮಟ್ಟದ ಮೇಲೆಯೇ ನಮ್ಮ ಜೀವನಮಟ್ಟ ಅವಲಂಬಿಸಿದೆ.
ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು ಎಂಬುದು ಒಂದು ಭ್ರಮೆ ಅಷ್ಟೆ. ನಿಜವಾದ ಮಾಲಿಕರು ಇವರೇ.
ಚುನಾವಣಾ ಸಂಧರ್ಭದಲ್ಲಿ ಜನಪ್ರಿಯ ವ್ಯಕ್ತಿಗಳು ಮಹಾ ಮೇಧಾವಿಗಳಂತೆ
” ಮತದಾನ ಒಂದು ಪವಿತ್ರ ಕರ್ತವ್ಯ. ನಿಮ್ಮ ಮತ ಚಲಾಯಿಸಿ ಪ್ರಜಾಪ್ರಭುತ್ವ ಉಳಿಸಿ ” ಎಂದು ಹೇಳುವವರನ್ನು ಜೈಲಿಗೆ ಕಳಿಸಬೇಕು ಎಂಬಷ್ಟು ಕೋಪ ಬರುತ್ತದೆ.
ಏಕೆಂದರೆ ಈ ಜನ ಪ್ರತಿನಿಧಿಗಳ ಹುಚ್ಚಾಟಕ್ಕೆ ಅವರೂ ಪರೋಕ್ಷವಾಗಿ ಬೆಂಬಲ ನೀಡಿದಂತೆ ಆಗುತ್ತಿದೆ.
ಪ್ರಜಾಪ್ರಭುತ್ವದ ನಿಜ ಯಶಸ್ಸು ಅಡಗಿರುವುದೇ ಜನರ ಜಾಗೃತಿಯ, ಜ್ಞಾನದ ಮಟ್ಟದಲ್ಲಿ ಏರಿಕೆಯಾದಾಗ ಮಾತ್ರ ಸಾಧ್ಯ.
ಅಲ್ಲಿಯವರೆಗೂ ಇದನ್ನು ಸಹಿಸುವ ಅನಿವಾರ್ಯ ನಮ್ಮೆಲ್ಲರದು……..
ವಿವೇಕಾನಂದ. ಹೆಚ್.ಕೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ