ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಸಿದ್ದಪಡಿಸಿರುವ ಬೆನ್ನಲ್ಲೇ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ.
ಇತ್ತೀಚೆಗೆ ಸಚಿವ ಸಿಟಿ ರವಿ ಜನಸಂಖ್ಯಾ ನಿಯಂತ್ರಣ ಮಸೂದೆ ರಾಜ್ಯದಲ್ಲೂ ಜಾರಿಯಾಗಬೇಕು ಎಂದಿದ್ದರು. ಇದರ ಬೆನ್ನಲ್ಲೀಗ ದಾವಣಗೆರೆಯಲ್ಲಿ ಬುಧವಾರ ಸಚಿವ ಭೈರತಿ ಬಸವರಾಜ್ ಕೂಡ ಕರ್ನಾಟಕದಲ್ಲಿ ಜನಸಂಖ್ಯಾ ನಿಯಂತ್ರಣ ಮದೂದೆ ಜಾರಿಗೆ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತಾಡಿದ ಸಚಿವ ಭೈರತಿ ಸುರೇಶ್ , ದೇಶದಲ್ಲಿ ಜನಸಂಖ್ಯೆ ನಿಯಂತ್ರಣ ನೀತಿ ಜಾರಿ ಅತ್ಯಗತ್ಯ. ಭಾರತದಲ್ಲಿ ಈಗ ಜನಸಂಖ್ಯೆ 150 ಕೋಟಿ ದಾಟುತ್ತಿದೆ. ಹೀಗಾದರೆ ಎಲ್ಲರಿಗೂ ಮೂಲಭೂತ ಸೌಲಭ್ಯ ಸಿಗೋದು ಅನುಮಾನ. ಅಮೆರಿಕಾ ಜನಸಂಖ್ಯೆ ಭಾರತಕ್ಕಿಂತ ಕಡಿಮೆ ಇದೆ. ಆದ್ದರಿಂದ ಅಮೆರಿಕಾದಲ್ಲಿ ಎಲ್ಲರಿಗೂ ಸೌಲಭ್ಯಗಳು ಸಿಗುತ್ತವೆ ಎಂದಿದ್ದಾರೆ.
ಕರ್ನಾಟಕದಲ್ಲೂ ಜನಸಂಖ್ಯಾ ನಿಯಂತ್ರಣ ಮಸೂದೆ ಜಾರಿಯಾಗಲಿ. ಇದರ ಸಾಧಕಬಾಧಕ ಚರ್ಚಿಸಿ ಸರ್ಕಾರ ಮುಂದಿನ ದಿನಗಳಲ್ಲಿ ಒಂದು ಸೂಕ್ತ ತೀರ್ಮಾನಕ್ಕೆ ಬರಲಿದೆ. ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಬಿಡುಗಡೆ ಮಾಡಿರುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ