ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಗೆ ತಮಿಳುನಾಡು ಬಿಜೆಪಿ ಸಿಎಂ ಸ್ಟ್ಯಾಲಿನ್ ಸರ್ಕಾರಕ್ಕೆ ಬೆಂಬಲ ನೀಡಲಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ತಿಳಿಸಿದರು.
ತಮಿಳುನಾಡಿ ಬಿಜೆಪಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಮೇಕೆದಾಟು ಅಣೆಕಟ್ಟು ವಿಚಾರದಲ್ಲಿ ತಮಿಳುನಾಡು ಬಿಜೆಪಿ, ತಮಿಳುನಾಡು ಸರ್ಕಾರದ ಜೊತೆಗೆ ನಿಲ್ಲುತ್ತದೆ ಎಂದಿದ್ದಾರೆ.
ಮೇಕೆದಾಟು ಅಣೆಕಟ್ಟು ವಿಷಯದಲ್ಲಿ ನಾವು ಸಂಪೂರ್ಣ ಸ್ಪಷ್ಟವಾಗಿದ್ದೇವೆ.. ಇದರಲ್ಲಿ ನಾವು ರಾಜಕೀಯ ಮಾಡುವುದಿಲ್ಲ ಎಂದು ಅಣ್ಣಾಮಲೈ ಹೇಳಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಪಕ್ಷವೇ ಆಡಳಿತದಲ್ಲಿದ್ದರೂ ಸಹ ತಮಿಳುನಾಡು ಬಿಜೆಪಿ ತಮಿಳುನಾಡು, ಜನರು, ರೈತರ ಹಿತರಕ್ಷಣೆಯ ಪರವಾಗಿ ನಿಲ್ಲುತ್ತದೆ. ಈ ವಿಚಾರದಲ್ಲಿ ನಾವು ಸ್ಪಷ್ಟ ನಿಲುವು ಹೊಂದಿದ್ದೇವೆ ಎಂದಿದ್ದಾರೆ.
ತಮಿಳುನಾಡು ರೈತರು ಸುಪ್ರೀಂ ಕೋರ್ಟ್ ಆದೇಶದಂತೆ ಕಾವೇರಿ ನೀರಿನಲ್ಲಿ ತನ್ನ ಪಾಲನ್ನು ಪಡೆಯಲೇಬೇಕೆಂದಿದ್ದಾರೆ.
ಇತ್ತೀಚೆಗೆ ಮುಖ್ಯಮಂತ್ರಿ ಸ್ಟಾಲಿನ್ ನಡೆಸಿದ ಸರ್ವಪಕ್ಷ ಸಭೆಯಲ್ಲಿ ಪಕ್ಷದ ಇಬ್ಬರು ಹಿರಿಯ ನಾಯಕರು ಭಾಗವಹಿಸಿದ್ದರು. ಹಾಗೂ ಪಕ್ಷ ಮೇಕೆದಾಟು ವಿಚಾರದಲ್ಲಿ ಸರ್ಕಾರದ ಪರವಾಗಿರಲಿದೆ ಎಂದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ