ಮಾಡೆಲ್ ಲೋಕದ ದಿಗ್ಗಜರ ಜಾಹೀರಾತುಗಳು………
ಓ ,
ಹಾಲು ಬಿಳುಪಿನ ಸುರಸುಂದರಾಂಗಿಣಿಯೇ,
ಹಾಯ್,
ಚೆಲುವಾಂತ ಚೆನ್ನಿಗ ಮನ್ಮಥನೇ,
Fair & Lovely – Fair & Handsome ಮುಂತಾದ Beauty ಜಾಹೀರಾತುಗಳ ಸಪ್ತಲೋಕದಲ್ಲೂ ಮಿಂಚುವ ಮಾಡಲ್ ಗಳೇ,
ನಿಮ್ಮ ಸೌಂದರ್ಯಕ್ಕೆ – ಅದೃಷ್ಟಕ್ಕೆ ಅಭಿನಂದನೆಗಳು.
ಆ Product ಗಳ Brand Ambassador ಆಗಿರುವುಕ್ಕೆ ಸಂತೋಷ.
ಆದರೆ,……
ಪಕ್ಕದ ಮನೆಯ ಆ ಕಪ್ಪಗಿನ ಹುಡುಗಿಯೊಬ್ಬಳು,
ಈ ನೆಲದಲ್ಲಿ ಹುಟ್ಟಿರುವುದಕ್ಕೆ,
ತನ್ನ ನಿಯಂತ್ರಣದಲ್ಲಿಲ್ಲದ ದೇಹದ ಬಣ್ಣದ ಕಾರಣಕ್ಕಾಗಿ ತನ್ನೊಳಗೇ ಕೊರಗುತ್ತಿದ್ದಾಳೆ,
ಮೊದಲು ಅವಳಿಗೆ ಹೇಳಿ,
” ಬಣ್ಣಗಳಲ್ಲಿ ಯಾವುದು ಶ್ರೇಷ್ಠ ಎಂದು “
ಆಕರ್ಷಕ ದೇಹದ ಮಾಡಲ್ ಲೋಕದ ದೇವಾನು ದೇವತೆಗಳೇ ,
ಸೂಟು ಬೂಟಿನ ಮಿರಿಮಿರಿ ಮಿಂಚುವ ಬಟ್ಟೆಗಳ ದಿಗ್ಗಜರೇ…..
ರೈಲು ನಿಲ್ದಾಣದ ಆ ಕಲ್ಲು ಬೆಂಚಿನ ಮೇಲೆ ಅರೆ ಬಟ್ಟೆಯಲ್ಲಿ ಮಲಗಿರುವ ನಮ್ಮದೇ ಕಂದಮ್ಮಗಳಿಗೆ ಒಮ್ಮೆ ತಿಳಿ ಹೇಳಿ,
ಅವರ ಬದುಕಿನ Brand ambassador ಯಾರೆಂದು….
Shampoo – Soap – Perfume ಗಳ ಘಮಲುಗಳಲ್ಲಿ ಮುಳುಗೇಳುವ ರಾಜಕುಮಾರ ರಾಜಕುಮಾರಿಯರೇ,
ನಮ್ಮ ಹಳ್ಳಿಯ ಅಜ್ಜಿಯ ಹೇನು ಬಿದ್ದ ತಲೆಯ ಕೆರೆತ ಕಡಿಮೆಯಾಗಲು ಏನು ಮಾಡಬೇಕೆಂದು ಸ್ವಲ್ಪ ಹೇಳಿ.
ಅದಕ್ಕೂ ಪ್ರಚಾರ ರಾಯಭಾರಿಗಳಾಗುವಿರೇ .?
ಚಿನ್ನ ವಜ್ರ ಮುಂತಾದ ಒಡವೆಗಳ ರಾಯಭಾರಿಗಳೇ,
ಅಪ್ಸರೆಯರೇ,
ವಿಧವೆಯರಿಗೆ ಮಾಸಾಶನ ಅರ್ಜಿ ಎಲ್ಲಿ ಸಿಗುತ್ತದೆ , ಅದನ್ನು ಭರ್ತಿ ಮಾಡುವುದು ಹೇಗೆ ಸ್ವಲ್ಪ ತಿಳಿಸಿಕೊಡಿ.
ಅವರಿಗಾರು Brand ambassador ಗಳು.
ಏಕೆಂದರೆ ಅವರೂ ಇದೇ ನೆಲದಲ್ಲಿ ಹುಟ್ಟಿದ್ದಾರೆ. ನಿಮ್ಮಂತೆಯೇ ಗಂಡು ಹೆಣ್ಣಿನ ಮಿಲನದ ಕೂಸುಗಳು . ನಿಮ್ಮ ಹತ್ತುಪಟ್ಟು ಶಕ್ತಿ ಸಾಮರ್ಥ್ಯ ಶ್ರಮ ಪ್ರಾಮಾಣಿಕತೆ ಅವರಿಗಿದೆ.
ಆದರೆ….
ನಿಮ್ಮಂತ ಮುಖವಾಡಗಳಿಲ್ಲ.
ಅವರು ಕೇವಲ ಮನುಷ್ಯ ಜೀವಿಗಳು.
ಕಪಟ ಅರಿಯದ ಸೃಷ್ಟಿಯ ಕೂಸುಗಳು.
ಶ್ರೀಮಂತರ ಅವಶ್ಯಕತೆಗಳನ್ನು ಪೂರೈಸಲು ಎಲ್ಲಾ ವ್ಯವಸ್ಥೆಗಳು ಇವೆ.
ಆದರೆ ಸಂಕಷ್ಟದ ಜನರ ನೋವುಗಳನ್ನು ಆಲಿಸಲು ಇರುವುದಾದರೂ ಯಾರು ?
ಆಧುನಿಕ ಸಮಾಜದ ವಿಕೃತಿಗೆ ಅನೇಕ ಉದಾಹಾರಣೆಗಳಿವೆ. ಆದರೆ ಸಮ ಸಮಾಜದ ನಿರ್ಮಾಣಕ್ಕೆ ಇರುವ ಮಾರ್ಗಗಳು ತೋಚುತ್ತಿಲ್ಲ…….
ಜಾಹೀರಾತುಗಳಲ್ಲಿ ಸಹ ಮಾನವೀಯ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸಿದರೆ ಎಷ್ಟೊಂದು ಉಪಯುಕ್ತ ಅಲ್ಲವೇ…….
ಹುಚ್ಚು ಕನಸೆಂದು ನಗುವ ಸ್ವಾತಂತ್ರ್ಯ ನಿಮಗಿದೆ..
- ವಿವೇಕಾನಂದ. ಹೆಚ್.ಕೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ