ರಾಜ್ಯದಲ್ಲಿ ಕೊರೊನಾ ವೈರಸ್ ನಿಂದಾಗಿ ಕಳೆದ 4 ತಿಂಗಳನಿಂದ ಮುಚ್ಚಿದ್ದ ಪದವಿ, ಡಿಪ್ಲೋಮಾ , ಎಂಜಿನಿಯರಿಂಗ್ ಕಾಲೇಜುಗಳು ಇಂದಿನಿಂದ ಆರಂಭವಾಗಲಿವೆ.
ಕೊರೋನಾ ವೈರಸ್ ಇಳಿಕೆಯಾದ ಹಿನ್ನೆಲೆಯಲ್ಲಿ ಇಂದಿನಿಂದ ಉನ್ನತ ಶಿಕ್ಷಣ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸಲು ಸಿದ್ದತೆ ಮಾಡಲಾಗಿದೆ.
ಕಾಲೇಜಿಗೆ ವಿದ್ಯಾರ್ಥಿಗಳ ಹಾಜರಿ ಕಡ್ಡಾಯವಲ್ಲ ಎಂದು ಸರ್ಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ. ಆದರೆ ಕಾಲೇಜುಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಿಸಿಎಂ ಅಶ್ವತ್ಥ್ ನಾರಾಯಣ ಸೂಚಿಸಿದ್ದಾರೆ.
ಈಗಾಗಲೇ ಶೇ.74 ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ಲಸಿಕೆ ಸಿಗುವಂತೆ ಕ್ರಮ ವಹಿಸಬೇಕು. ಇಚ್ಛೆ ಇದ್ದರೆ ಮಾತ್ರ ಭೌತಿಕ ತರಗತಿಗಳಿಗೆ ಹಾಜರಾಗಬಹುದು. ಇಲ್ಲವೇ ಆನ್ಲೈನ್ ಮೂಲಕವೂ ಹಾಜರಾಗಬಹುದು. ಆದರೆ, ಯಾವುದಾದರೂ ಒಂದರಲ್ಲಿ ಹಾಜರಾತಿ ಕಡ್ಡಾಯ ಎಂದು ಸೂಚಿಸಲಾಗಿದೆ.
ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಈಗಾಗಲೇ ಬಹುತೇಕ ಕಾಲೇಜು ಆಡಳಿತ ಮಂಡಳಿಗಳು ಕಾಲೇಜು ಕೊಠಡಿಗಳನ್ನು ಸ್ಯಾನಿಟೈಸ್ ಮಾಡಿ ಸಿದ್ಧವಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ