ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಕೊಟ್ಟಿದ್ದಕ್ಕೆ ಮನನೊಂದ ಬಿಎಸ್ವೈ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಬೊಮ್ಮಾಲಾಪುರ ದಲ್ಲಿ ಜರುಗಿದೆ.
ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ. ರವಿ (35) ಮೃತ ದುರ್ದೈವಿ.
ರವಿ ಹೋಟೆಲ್ನಲ್ಲಿ ಕೆಲಸ ಮಾಡಿಕೊಂಡಿದ್ದ. ಯಡಿಯೂರಪ್ಪನವರ ಅಪ್ಪಟ ಅಭಿಮಾನಿ. ನಿನ್ನೆ ಸಿಎಂ ಸ್ಥಾನಕ್ಕೆ ಬಿಎಸ್ವೈ ರಾಜೀನಾಮೆ ಕೊಡುತ್ತಿದ್ದಂತೆ ಮಂಕಾಗಿದ್ದ. ರಾಜೀನಾಮೆ ಘೋಷಣೆಯ ವಿಡಿಯೋವನ್ನು ಪದೇಪದೆ ನೋಡಿದ ರವಿ, ಯಡಿಯೂರಪ್ಪ ಅವರು ಕಣ್ಣೀರು ಸುರಿಸಿದ್ದು ಬೇಸರ ತಂದಿದೆ ಎಂದು ಗ್ರಾಮದ ಗುರುಸ್ವಾಮಿ ಬಳಿ ಹೇಳಿಕೊಂಡಿದ್ದ. ರಾತ್ರಿವರೆಗೂ ಇದೇ ಬೇಸರದಲ್ಲಿದ್ದ. ಬೆಳಗ್ಗೆ ಅವನ ಕ್ಯಾಂಟೀನ್ ಬಳಿಗೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
2017ರಲ್ಲಿ ನಡೆದ ಉಪಚುನಾವಣೆಗೆ ಹಾಲಿ ಶಾಸಕ ನಿರಂಜನ್ ಕುಮಾರ್ ಪರ ಬಿ.ಎಸ್.ಯಡಿಯೂರಪ್ಪ ಪ್ರಚಾರ ಮಾಡಲು ಗುಂಡ್ಲುಪೇಟೆಗೆ ಆಗಮಿಸಿದ್ದರು. ಈ ವೇಳೆ ಅವರ ಜತೆಗೆ ರವಿ ಊರುಕೇರಿಗಳನ್ನು ಸುತ್ತಿದ್ದ. ಮಾತು ಮಾತಿ.
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್