ಭವಿಷ್ಯದಲ್ಲಿ ಎದುರಾಗುವ ಯಾವುದೇ ಚುನಾವಣೆಯಲ್ಲಿ ತಾವು ಸ್ಪರ್ಧಿಸಿಸುವುದಿಲ್ಲ ಎಂದು ಹಿರಿಯ ರಾಜಕಾರಣಿ, ಹಾಲಿ ಸಂಸದ ಶ್ರೀನಿವಾಸ ಪ್ರಸಾದ್ ಅವರು ಘೋಷಿಸುವ ಮೂಲಕ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವುದಾಗಿ ಪ್ರಕಟಿಸಿದ್ದಾರೆ.
ತಮ್ಮ ೭೫ನೇ ವರ್ಷದ ಹುಟ್ಟುಹಬ್ಬದಂದೇ ಮೈಸೂರಿನಲ್ಲಿ ಇಂದು ಈ ತೀರ್ಮಾನ ಪ್ರಕಟಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ನಿಲುವಿಗೆ ಈ ಮೂಲಕ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.
ಇದುವರೆಗೆ ನಾನು ೧೪ ಚುನಾವಣೆ ಎದುರಿಸಿದ್ದೇನೆ. ಈ ಹಿಂದಿನ ತಮ್ಮ ೧೨ನೇಚುನಾವಣೆಯೇ ಸಾಕು ಎನಿಸಿತ್ತು. ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಅವಧಿಯಲ್ಲಿ ಕಂದಾಯ ಸಚಿವನಾಗಿ ಅವಧಿ ಪೂರ್ಣಗೊಳಿಸಲು ಎರಡು ವರ್ಷ ಅವಕಾಶ ನೀಡಿದ್ದರೆ ಸಾಕಾಗಿತ್ತು. ಹಾಗೆಯೇ ಅದೇ ನನ್ನ ಕಡೆಯ ಚುನಾವಣೆಯೂ ಆಗುತ್ತಿತ್ತು. ಆದರೆ ಬದಲಾದ ರಾಜಕೀಯ ವಾತಾವರಣದಿಂದಾಗಿ ತಮ್ಮ ನಿರ್ಧಾರ ಬದಲಿಸಿ ಇನ್ನೆರಡು ಚುನಾವಣೆ ಎದುರಿಸುವಂತಾಯಿತು ಎಂದು ವಿಶ್ಲೇಷಿಸಿದ್ದಾರೆ.
ಆರು ಬಾರಿ ಸಂಸದರಾಗಿರುವ ಪ್ರಸಾದ್ ಕೇಂದ್ರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿ ಸಚಿವರಾಗಿದ್ದರು. ಬಿ.ಎಸ್. ಯಡಿಯೂರಪ್ಪ ಅವರು ಎರಡು ವರ್ಷಗಳ ಹಿಂದೆ ಮುಖ್ಯಮಂತ್ರಿಯಾಗುವ ಸಮಯದಲ್ಲೇ ಪ್ರಸಾದ ಮೈಸೂರು ನಿವಾಸ ಒಂದು ರೀತಿಯ ರಾಜಕೀಯ ಶಕ್ತಿ ಕೇಂದ್ರವಾಗಿಯೂ ಪರಿವರ್ತಿತವಾಗಿತು.
ಇತ್ತೀಚಿನ ಹಲವು ಸಂದರ್ಭದಲ್ಲಿ ಮಾಜಿ ಸಚಿವ ಎಚ್. ವಿಶ್ವನಾಥ್ ಸೇರಿದಂತೆ ಹಲವು ರಾಜಕೀಯ ನಾಯಕರು ಇಲ್ಲಿಗೆ ಭೇಟಿ ನೀಡಿ ರಾಜಕೀಯ ಮಾತುಕತೆ ನಡೆಸಿರುವುದು ಈಗ ಇತಿಹಾಸ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು