March 12, 2026

Newsnap Kannada

The World at your finger tips!

mtb anand

ಖಾತೆ ಹಂಚಿಕೆ: ಇಬ್ಬರು ಸಚಿವರ ಅತೃಪ್ತಿ

Spread the love

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯ ನೂತನ ಸಚಿವ ಸಂಪುಟದ ಇಬ್ಬರು ಸಚಿವರು ತಮಗೆ ದೊರೆತ ಖಾತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವರಾದ ಆನಂದ್ ಸಿಂಗ್ ಮತ್ತು ಎಂಟಿಬಿ ನಾಗರಾಜ್ ಅವರೇ ಈ ಅತೃಪ್ತಿ ಹೊರಹಾಕಿದವರು.


ತಮಗೆ ದೊರೆತಿರುವ ಪರಿಸರ ಮತ್ತು ಪ್ರವಾಸೋದ್ಯಮ ಖಾತೆ ಬಗ್ಗೆ ಆನಂದ್ ಸಿಂಗ್ ಬೇಸರ ವ್ಯಕ್ತಪಡಿಸಿದ್ದಾರೆ. ನಾನು ಹಠವಾದಿ, ನನ್ನ ಹಟ ಬಿಡುವುದಿಲ್ಲ. ನಾನು ಯಾವ ದಾರಿ ತುಳಿಯುತ್ತೇನೆ ಎಂಬುದನ್ನು ಈಗಲೇ ಹೇಳಲಾಗದು. ಮುಖ್ಯಮಂತ್ರಿಗಳಿಂದ ಬರುವ ಉತ್ತರ ಆಧರಿಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಅವರು ಹೇಳಿದರು.


ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆಗಳ ಸಚಿವರಾಗಿರುವ ಎಂಟಿಬಿ ನಾಗರಾಜ್ ಅವರು ತಮಗೆ ಲಭಿಸಿದ ಖಾತೆ ಬಗ್ಗೆ ಅಕ್ರೋಶಗೊಂಡಿದ್ದಾರೆ. ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹಂಚಿಕೆಯಲ್ಲಿ ತಮಗೆ ಅಸಮಾಧಾನ ಇದೆ ಎಂದು ಎಂಟಿಬಿ ತಮ್ಮ ಟ್ವೀಟ್‌ನಲ್ಲಿ ಹೇಳಿದ್ದಾರೆ. ಮುಂದಿನ ಎರಡು- ಮೂರು ದಿನಗಳಲ್ಲಿ ತಮ್ಮ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ.

error: Content is protected !!