ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯ ನೂತನ ಸಚಿವ ಸಂಪುಟದ ಇಬ್ಬರು ಸಚಿವರು ತಮಗೆ ದೊರೆತ ಖಾತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವರಾದ ಆನಂದ್ ಸಿಂಗ್ ಮತ್ತು ಎಂಟಿಬಿ ನಾಗರಾಜ್ ಅವರೇ ಈ ಅತೃಪ್ತಿ ಹೊರಹಾಕಿದವರು.
ತಮಗೆ ದೊರೆತಿರುವ ಪರಿಸರ ಮತ್ತು ಪ್ರವಾಸೋದ್ಯಮ ಖಾತೆ ಬಗ್ಗೆ ಆನಂದ್ ಸಿಂಗ್ ಬೇಸರ ವ್ಯಕ್ತಪಡಿಸಿದ್ದಾರೆ. ನಾನು ಹಠವಾದಿ, ನನ್ನ ಹಟ ಬಿಡುವುದಿಲ್ಲ. ನಾನು ಯಾವ ದಾರಿ ತುಳಿಯುತ್ತೇನೆ ಎಂಬುದನ್ನು ಈಗಲೇ ಹೇಳಲಾಗದು. ಮುಖ್ಯಮಂತ್ರಿಗಳಿಂದ ಬರುವ ಉತ್ತರ ಆಧರಿಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಅವರು ಹೇಳಿದರು.
ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆಗಳ ಸಚಿವರಾಗಿರುವ ಎಂಟಿಬಿ ನಾಗರಾಜ್ ಅವರು ತಮಗೆ ಲಭಿಸಿದ ಖಾತೆ ಬಗ್ಗೆ ಅಕ್ರೋಶಗೊಂಡಿದ್ದಾರೆ. ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹಂಚಿಕೆಯಲ್ಲಿ ತಮಗೆ ಅಸಮಾಧಾನ ಇದೆ ಎಂದು ಎಂಟಿಬಿ ತಮ್ಮ ಟ್ವೀಟ್ನಲ್ಲಿ ಹೇಳಿದ್ದಾರೆ. ಮುಂದಿನ ಎರಡು- ಮೂರು ದಿನಗಳಲ್ಲಿ ತಮ್ಮ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ