ಕನ್ನಡ ಚಿತ್ರರಂಗದ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ತಪ್ಪು ಆಸ್ತಿ ಲೆಕ್ಕ ನೀಡಿ ಪಾಲಿಕೆಗೆ ಕೋಟಿ ಕೋಟಿ ತೆರಿಗೆಯನ್ನು ವಂಚಿಸಿದ್ದಾರೆ ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಆರೋಪಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ರಮೇಶ್ ಈ ಕುರಿತಂತೆ ದಾಖಲೆಗಳ ಸಮೇತ ಪಾಲಿಕೆ ಆಯುಕ್ತರಿಗೆ ಎನ್ಆರ್ ರಮೇಶ್ ದೂರು ಕೂಡ ಕೊಟ್ಟಿದ್ದಾರೆ.
ಜಾಲಹಳ್ಳಿ ಕ್ರಾಸ್ ಬಳಿಯಿರುವ ರಾಕ್ ಲೈನ್ ಮಾಲ್ನಿಂದ ತೆರಿಗೆ ವಂಚನೆ ಮಾಡಲಾಗಿದೆ. 2012-13 ರಿಂದ ಆಸ್ತಿಯ ವಿಸ್ತೀರ್ಣದಲ್ಲಿ ತಪ್ಪು ಲೆಕ್ಕ ತೋರಿಸಿ ಕೋಟಿಗಟ್ಟಲೇ ತೆರಿಗೆ ವಂಚನೆ ಮಾಡಿದ್ದಾರೆ ಎಂದು ಎನ್ಆರ್ ರಮೇಶ್ ದೂರಿದರು.
ಟಾಪ್ 100 ತೆರಿಗೆ ವಂಚಕರ ಪಟ್ಟಿಯಲ್ಲೂ ರಾಕ್ ಲೈನ್ ಹೆಸರು ಕಂಡು ಬಂದಿಲ್ಲ. ಇದು ಸಾಕಷ್ಟು ಸಂಶಯಕ್ಕೆ ಕಾರಣವಾಗಿದೆ. ರಾಕ್ಲೈನ್ ತೆರಿಗೆ ವಂಚನೆ ಮಾಡಿರುವ ಕುರಿತ ದಾಖಲೆಗಳನ್ನು ಬಿಡುಗಡೆ ಮಾಡಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತರಿಗೆ ದಾಖಲೆಗಳೊಂದಿಗೆ ರಮೇಶ್ ದೂರು ನೀಡಿದ್ದಾರೆ.
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್