ಬೆಂಗಳೂರಿನ ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿಗೆ ಸೇರಿದ ಎರಡು ಕಾರುಗಳಿಗೆ ಬೆಂಕಿ ಪ್ರಕರಣ ಈಗ ಟ್ವಿಸ್ಟ್ ಸಿಕ್ಕಿದೆ.
ಈ ಕೃತ್ಯದ ಹಿಂದೆ ನಡೆದಿದ್ದ ಬೆಡ್ ಬ್ಲಾಕಿಂಗ್ ದಂಧೆ ಬಯಲು ಮಾಡಿದ್ದೆ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಾಕಲು ಪ್ರಮುಖ ಕಾರಣ ಎನ್ನಲಾಗಿದೆ.
ಕೋವಿಡ್ ಸಮಯದಲ್ಲಿ ಸಂಸದ ತೇಜಸ್ವಿ ಸೂರ್ಯ ಮತ್ತು ಶಾಸಕ ಸತೀಶ್ ರೆಡ್ಡಿ ನೇತೃತ್ವದಲ್ಲಿ ಬೆಂಗಳೂರಿನ ಲಗಲಿ ನಡೆಯುತ್ತಿದ್ದ ಬೆಡ್ ಬ್ಲಾಕಿಂಗ್ ದಂಧೆ ಬಯಲಿಗೆಳೆದಿದ್ದರು.
ಈ ದಂಧೆಯಲ್ಲಿ ಸತೀಶ್ ರೆಡ್ಡಿ ಆಪ್ತ ಬಾಬು ಸೇರಿದಂತೆ ಹಲವರ ಬಂಧನ ಆಗಿತ್ತು. ಈ ದಂಧೆಯಲ್ಲಿ ಸತೀಶ್ ರೆಡ್ಡಿ ಕೂಡ ಇದ್ದರು ಅನ್ನೋ ಆರೋಪ ಕೂಡ ಕೇಳಿಬಂದಿತ್ತು.. ಈ ಪ್ರಕರಣದಲ್ಲಿ ಹೆಸರೂ ಕೇಳಿ ಬಂದಿದ್ದರೂ ಕೂಡ ಶಾಸಕ ಆರೋಪ ತಳ್ಳಿ ಹಾಕಿದ್ದರು.
ಸತೀಶ್ ರೆಡ್ಡಿ ಬಚಾವ್ ಆಗಲು ತಮ್ಮ ಆಪ್ತನನ್ನು ಜೈಲಿಗೆ ಕಳಿಸಿದ್ದರು.
ಆಪ್ತನನ್ನೇ ಜೈಲಿಗೆ ಕಳಿಸಿದ್ದಕ್ಕಾಗಿ ಆಪ್ತನ ಸಂಬಂಧಿಕರಿಂದಲೇ ಈ ಕೃತ್ಯ ಮಾಡಿಸಿರೋ ಶಂಕೆ ವ್ಯಕ್ತವಾಗಿದೆ.
ಸದ್ಯ ತನಿಖೆ ಆರಂಭಿಸಿರುವ ಪೊಲೀಸರು ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಆಪ್ತರ ಕೈವಾಡ ಇರೋ ಶಂಕೆ, ಮತ್ತು ಬೇಗೂರು ಕೆರೆಯ ಶಿವನ ವಿಗ್ರಹ ವಿಚಾರವಾಗಿಯೂ ನಡೆದ ಘಟನೆ ಬಗ್ಗೆ ಯೂ ತನಿಖೆ ಮಾಡುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ