ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯನ್ನು ಭೇಟಿ ಮಾಡಲು ಅವರ ಮನೆಗೆ ಹೋಗುವವರು ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ.
ಈ ಕುರಿತು ಆರ್ಟಿ ನಗರದ ಸಿಎಂ ಮನೆ ಮುಂದೆ ಬೋರ್ಡ್ ಕೂಡ ಹಾಕಲಾಗಿದೆ.
ಮುಖ್ಯಮಂತ್ರಿ ನಿವಾಸಕ್ಕೆ ಬರುವವರು ಮೊಬೈಲ್ ತರುವಂತಿಲ್ಲ ಎಂದು ತಿಳಿಸಲಾಗಿದೆ. ಪೊಲೀಸರು ಪ್ರತಿಯೊಬ್ಬರ ತಪಾಸಣೆ ನಡೆಸಿ ಮೊಬೈಲ್ ಇಲ್ಲವೆಂದು ಖಚಿತ ಪಡಿಸಿಕೊಂಡ ನಂತರ ಒಳಗಡೆ ಬಿಡಲಾಗುತ್ತದೆ.
ಮುಖ್ಯಮಂತ್ರಿ ಭೇಟಿ ಮಾಡುವವರು ಸಮಸ್ಯೆ ಹೇಳಿಕೊಂಡು ಮನವಿ ಸಲ್ಲಿಸಿದ ಮೇಲೆ ಸೆಲ್ಫಿಗೆ ಮುಂದಾಗುತ್ತಾರೆ. ಇದರಿಂದಾಗುವ ಕಿರಿಕಿರಿ ತಪ್ಪಿಸಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.
ಇಲ್ಲಿಯವರೆಗೆ ಮುಖ್ಯಮಂತ್ರಿ ಭೇಟಿ ಮಾಡುವ ಸಾರ್ವಜನಿಕರು ತಮ್ಮ ಮೊಬೈಲ್ ತೆಗೆದುಕೊಂಡು ಹೋಗಬಹುದಿತ್ತು. ಇನ್ಮುಂದೆ ಆ ರೀತಿ ಇಲ್ಲ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ