ಅತ್ಯಾಚಾರ ಪ್ರಕರಣ: ವರದಿ ನೀಡಲು ಸೂಚನೆ-ಬೊಮ್ಮಾಯಿ

Team Newsnap
0 Min Read
Congress leaders who day dream of power - CM ಅಧಿಕಾರದ ಹಗಲು ಕನಸು ಕಾಣುವ ಕಾಂಗ್ರೆಸ್ ನಾಯಕರು - ಸಿಎಂ

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖಾ ವರದಿಯನ್ನು ನನಗೇ ನೇರವಾಗಿ ಸಲ್ಲಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ನವದೆಹಲಿಯಲ್ಲಿ ವರದಿಗಾರರೊಂದಿಗೆ ಅವರು ಮಾತನಾಡಿ, ಈ ಪ್ರಕರಣದಲ್ಲಿ ಯಾವುದೇ ರೀತಿಯ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದರು. ಘಟನೆ ಕುರಿತು ಪೊಲೀಸ್ ಮಹಾನಿರ್ದೇಶಕರು, ಎಡಿಜಿಪಿ ಪ್ರತಾಪ ರೆಡ್ಡಿ ಮತ್ತು ಮೈಸೂರು ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿರುವೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರಿಗೆ ಕಾನೂನಿನ ರೀತ್ಯ ಕಠಿಣ ಶಿಕ್ಷೆ ನೀಡುವಂತೆ ನಿರ್ದೇಶನ ನೀಡಿರುವುದಾಗಿ ತಿಳಿಸಿದರು.

Share This Article
Leave a comment