ರಾಜ್ಯದಲ್ಲಿ 1 ರಿಂದ 8 ನೇ ತರಗತಿ ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಾಳೆ ಮಹತ್ವದ ಸಭೆ ನಡೆಯಲಿದೆ.ಕೊರೊನಾ ತೀವ್ರತೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಸಾಕಷ್ಟು ಕಡಿಮೆಯಾಗಿದೆ.
9 ರಿಂದ 12 ನೇ ತರಗತಿಗಳು ಈಗಾಗಲೇ ಆರಂಭವಾಗಿರುವ ಹಿನ್ನೆಲೆಯಲ್ಲಿ 1 ರಿಂದ 8 ನೇ ತರಗತಿಗಳು ಆರಂಭಿಸುವ ಬಗ್ಗೆ ಸರ್ಕಾರ ಸಕಾರಾತ್ಮಕ ತೀರ್ಮಾನ ತೆಗೆದುಕೊಳ್ಳಲಿದೆಯೇ ಎಂಬ ಕುತೂಹಲ ಸಾಕಷ್ಟು ಇದೆ.
ಮಕ್ಕಳು ಮತ್ತು ಪೋಷಕರು ಶಾಲೆ ಆರಂಭದ ಬಗ್ಗೆ ಉತ್ಸುಕತೆ ತೋರುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್, ತಾಂತ್ರಿಕ ಸಲಹಾ ಸಮಿತಿ ನಾಳಿನ ಸಭೆಯಲ್ಲಿ ಸೆಪ್ಟೆಂಬರ್ 1 ರಿಂದಲೇ ಆರಂಭಿಸುವಂತೆ ತಿಳಿಸಿದರೆ ಶಿಕ್ಷಣ ಇಲಾಖೆ ಸಿದ್ಧ ಎಂದೂ ಹೇಳಿದ್ದಾರೆ.
6 ರಿಂದ 8 ನೇ ತರಗತಿ ಆರಂಭಕ್ಕೆ ಗಮನ ನೀಡಿ ಕೆಲ ದಿನಗಳ ನಂತರ 1 ರಿಂದ 5 ನೇ ತರಗತಿಗೆ ಹಸಿರು ನಿಶಾನೆ ತೋರಲು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು