ಮಂಡ್ಯ ದ ಮಿಮ್ಸ್ ನ ಹೆರಿಗೆ ಆಸ್ಪತ್ರೆ ಎದುರಿನ ಕ್ಯಾಂಟೀನ್ ಅನ್ನು ಸೆಷನ್ಸ್ ನ್ಯಾಯಾಲಯದ ಆದೇಶದಂತೆ ಇಂದು ಕೊನೆಗೂ ತೆರವುಗೊಳಿಸಲಾಯಿತು.
ಕ್ಯಾಂಟೀನ್ ಒಳಗಿದ್ದ ಸಾಮಗ್ರಿಗಳೆಲ್ಲವನ್ನೂ ಹೊರಹಾಕಲಾಗಿದೆ. ಅಕ್ರಮವಾಗಿ ಕಟ್ಟಿದ್ದ ಗೋಡೆಯನ್ನು ಕೆಡವಲಾಗಿದೆ. ಅಲ್ಲದೇ ಸದ್ಯಕ್ಕೆ ಮಿಮ್ಸ್ ನಿರ್ದೇಶಕರು ಕ್ಯಾಂಟೀನ್ ಇದ್ದ ಜಾಗವನ್ನು ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದಾರೆ
ಪ್ರಕರಣ ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರೆದಿದೆ.
ದಾನಿಯೊಬ್ಬರು ತಂಗುದಾಣವನ್ನು ನಿರ್ಮಿಸಿಕೊಟ್ಟಿದ್ದರು. ಈ ತಂಗುದಾಣವನ್ನು ಮಿಮ್ಸ್ ವೈದ್ಯಾಧಿಕಾರಿಗಳು ಅಕ್ರಮವಾಗಿ ಕ್ಯಾಂಟೀನ್ ನಡೆಸುವುದಕ್ಕೆ ನೀಡಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಯಿತು. ಇದರಿಂದ ಹೆರಿಗೆ ವಿಭಾಗದಲ್ಲಿದ್ದ ಗರ್ಭಿಣಿ ಹಾಗೂ ಬಾಣಂತಿಯರ ಸಂಬಂಧಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ಸಾರ್ವಜನಿಕರು ವೈದ್ಯಾಧಿಕಾರಿಗಳ ಕ್ರಮದ ವಿರುದ್ಧ ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು.
3 ವರ್ಷಗಳ ಸುದೀರ್ಘ ಹೋರಾಟದ ಬಳಿಕ ತಂಗುದಾಣದ ಜಾಗವನ್ನು ವಶಕ್ಕೆ ಪಡೆಯುವಂತೆ ನ್ಯಾಯಾಲಯ ಮಿಮ್ಸ್ ನಿರ್ದೇಶಕರಿಗೆ ಸೂಚನೆ ನೀಡಿತ್ತು. ಹೀಗಾಗಿ ತಂಗುದಾಣವಿರುವ ಜಾಗವನ್ನು ಸಾರ್ವಜನಿಕರಿಗೆ ಮುಕ್ತ ಮಾಡಲಾಗಿದೆ
- 50:50 ಅನುಪಾತದಲ್ಲಿ ಹಂಚಿಕೆಗೊಂಡ 1,400 ನಿವೇಶನಗಳ ಜಪ್ತಿ ಮಾಡಬೇಕು: ಸಿಎಂಗೆ ಬಿಜೆಪಿ ಶಾಸಕ ಆಗ್ರಹ
- ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ
- ಕಲಬುರಗಿಯಲ್ಲಿ ಭೀಕರ ಅಪಘಾತ – ನಾಲ್ವರು ದುರ್ಮರಣ
- ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
- ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಮರೀಗೌಡ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
More Stories
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಮರೀಗೌಡ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ