ಐಎಎಸ್ ಅಧಿಕಾರಿ ಅನುರಾಗ ತಿವಾರಿ ಸಾವಿನ ಹಿಂದೆ ತಮ್ಮ ಪತ್ನಿ, ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಕೈವಾಡ ಇದೆ ಎಂದು ಐಎಫ್ಎಸ್ ಅಧಿಕಾರಿ ನಿತೀನ್ ಸುಭಾಶ್ ಗಂಭೀರ ಆರೋಪ ಮಾಡಿ, ಈ ಸಂಬಂಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ವರ್ತಿಕಾ ಕಟಿಯಾರ್ ಹಾಗೂ ಅವರ ಪತಿ ಐಎಫ್ಎಸ್ ಅಧಿಕಾರಿ ನಿತೀನ್ ಸುಭಾಶ್ ನಡುವಿನ ಕೌಟುಂಬಿಕ ಕಲಹ ತಾರಕಕ್ಕೇರಿದೆ.
ರಾಜ್ಯದ ಮುಖ್ಯಕಾರ್ಯದರ್ಶಿ ರವಿಕುಮಾರ್ ಅವರಿಗೆ ಪತ್ರ ಬರೆದು ಪತ್ನಿ ವರ್ತಿಕಾ ಕಟಿಯಾರ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಬೇರೊಬ್ಬನ ಜೊತೆ ಅವರು ಓಡಾಟ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
ಅಯಾಜ್ ಖಾನ್ ಎಂಬುವನ ಜೊತೆ ಕೆಸಿನೊ ಸೇರಿದಂತೆ ಬೇರೆ ಬೇರೆ ಕಡೆ ಓಡಾಡುತ್ತಿದ್ದಾರೆ. ಶ್ರೀಲಂಕಾ, ಅಫ್ಘಾನಿಸ್ತಾನ, ಸ್ವಿಟ್ಜರ್ಲ್ಯಾಂಡ್, ಆಸ್ಟ್ರೀಯಾ, ಇಟಲಿ ಸೇರಿದಂತೆ ವಿವಿಧ ದೇಶಗಳಿಗೆ ಜೊತೆಯಲ್ಲಿ ಓಡಾಟ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಅನುರಾಗ್ ಸಾವು ಪ್ರಕರಣದಲ್ಲಿ ಆಕೆಯ ವಿರುದ್ಧ ಕ್ರಮ ಜರುಗಿಸಬೇಕೆಂದು ಪತ್ರದಲ್ಲಿ ನಿತೀನ್ ಸುಭಾಶ್ ಮನವಿ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು