ಕೇಂದ್ರದ ಬಿಜೆಪಿ ಸರ್ಕಾರವು ಅಡುಗೆ ಅನಿಲ, ಪೆಟ್ರೋಲ್, ಡೀಸಲ್ ಮತ್ತು ಅಗತ್ಯ ದಿನಬಳಕೆ ವಸ್ತುಗಳ ಮೇಲೆ ನಿರಂತರವಾಗಿ ಬೆಲೆಗಳನ್ನು ಏರಿಕೆ ಮಾಡುತ್ತಿರುವುದನ್ನು ಖಂಡಿಸಿ ಶ್ರೀರಂಗಪಟ್ಟಣ ಬ್ಲಾಕ್ ಯುವ ಕಾಂಗ್ರೆಸ್ ಮತ್ತು ಗ್ರಾಮಾಂತರ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಯುವ ಕಾಂಗ್ರೆಸ್ ನ ಉಪಾಧ್ಯಕ್ಷೆ ಭವ್ಯ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ನ ಉಸ್ತುವಾರ ಚೈತ್ರ ನೇತೃತ್ವದಲ್ಲಿ ಶ್ರೀರಂಗಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಸಿಲೆಂಡರ್ ಗಳನ್ನು ಹಿಡಿದುಕೊಂಡು ಯುವ ಕಾಂಗ್ರೆಸ್ ನ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಬೃಹತ್ ಪ್ರತಿಭಟನೆಯನ್ನು ನಡೆಸಿದರು.
ಈ ಪ್ರತಿಭಟನೆಯಲ್ಲಿ ಶ್ರೀರಂಗಪಟ್ಟಣ ಬ್ಲಾಕ್ ಯುವ ಕಾಂಗ್ರೆಸ್ ನ ಅಧ್ಯಕ್ಷ ಜಯಕುಮಾರ್ ಎಸ್, ಗ್ರಾಮಾಂತರ ಯುವ ಕಾಂಗ್ರೆಸ್ ನ ಅಧ್ಯಕ್ಷ ಸಂಜಯ್ , ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ದಿಲೀಪ್, ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಶ್ರೀಧರ್, ಗ್ರಾಮಾಂತರ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಮಂಚೇಗೌಡ, ಗ್ರಾಮಾಂತರ ಯುವ ಕಾಂಗ್ರೆಸ್ ಕಾರ್ಯದರ್ಶಿ ಇಫ್ತಿ, ಮಂಡ್ಯ ನಗರ ಯುವ ಕಾಂಗ್ರೆಸ್ ಅಧ್ಯಕ್ಷ, ಶಿವರಾಜ್ ರವರು ಮತ್ತು ಕಾರ್ಯಕರ್ತರುಗಳು ಈ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು