ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ತೆಗೆದುಕೊಂಡ ನಂತರ ರಾಜ್ಯದ ಜನರಿಗೆ ಒಳ್ಳೆಯ ಸಂದೇಶ ಹೋಗಿದೆ. ಒಂದು ಮುಕ್ಕಾಲು ವರ್ಷ ರಾಜ್ಯದ ಜನರು ನೆಮ್ಮದಿಯಿಂದ ಇರಬಹುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಇಂದು ಹೇಳಿದರು.
ಶಿರಸಿಯಲ್ಲಿ ಕೆಡಿಸಿಸಿ ಬ್ಯಾಂಕಿನ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು. ಬೊಮ್ಮಾಯಿಯವರು ತಾಳ್ಮೆಯಿಂದ ಒಳ್ಳೊಳ್ಳೆ ಕಾರ್ಯಕ್ರಮ ಕೊಡುತ್ತಾರೆ ಎಂಬ ಸಂದೇಶ ಜನತೆಗೆ ಹೋಗಿದೆ ಎಂದರು.
ಬೆಲೆ ಹೆಚ್ಚಳ ಸಂಬAಧ ಮುಖ್ಯಮಂತ್ರಿಗಳು 7 ರಂದು ದೆಹಲಿಗೆ ಹೋಗುತ್ತಾರೆ. ಪ್ರಧಾನಿ ಮೋದಿ ಮತ್ತು ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸುವರು ಎಂದು ಸಹಕಾರ ಸಚಿವರು ತಿಳಿಸಿದರು.
ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಜಾರುಮಾಡಿಕೊಂಡಿದ್ದ ಶಿವರಾಂ ಹೆಬ್ಬಾರ್ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಉರುಳಿಸಲು ಸಹಕಾರ ಕೋರಿದ್ದರು. ತಾವು, ಭೈರತಿ ಬಸವರಾಜ್ ಸೇರಿ ಎಲ್ಲರೂ ಅವರೊಂದಿಗೆ ಕೈಜೋಡಿಸಿದೆವು ಎಂಬ ಹಳೆಯ ಘಟನೆಯನ್ನು ಸೋಮಶೇಖರ್ ನೆನಪಿಸಿಕೊಂಡರು. ನಾವೆಲ್ಲ ಬೇಡದ ಖಾತೆ ಪಡೆದು ಒಳ್ಳೆಯ ಕೆಲಸ ಮಾಡುತ್ತಿದ್ದೇವೆ ಎಂಬುದನ್ನು ಸಣ್ಣ ಅಪಸ್ವರದ ಧ್ವನಿಯಲ್ಲಿ ಹೊರಹಾಕಿದರು.
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ