ಪಶ್ಚಿಮ ಬಂಗಾಳದ ಭಬನಿಪುರ ಕ್ಷೇತ್ರದ ಉಪ ಚುನಾವಣೆಗೆ ಸಿಎಂ ಮಮತಾ ಬ್ಯಾನರ್ಜಿ ಶುಕ್ರವಾರ ನಾಮಪತ್ರ ಸಲ್ಲಿಸಿದರು.
ಮಮತಾ ಬ್ಯಾನರ್ಜಿ ಅವರಿಗೆ ಭಬನಿಪುರ ಕ್ಷೇತ್ರದಲ್ಲಿ ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ. ಒಂದೊಮ್ಮೆ ಚುನಾವಣೆ ಸೋತರೆ ಮುಖ್ಯಮಂತ್ರಿ ಸ್ಥಾನದಿಂದ ಅವರು ಕೆಳಗಿಳಿಯ ಬೇಕಾಗುತ್ತೆ.
ಈ ಹಿನ್ನಲೆ ಉಪಚುನಾವಣೆ ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದೆ.
ಈ ನಡುವೆ ಬಿಜೆಪಿಯಿಂದ ಮಮತಾ ಬ್ಯಾನರ್ಜಿ ವಿರುದ್ಧ ಕಣಕ್ಕೆ ಇಳಿಯುವ ಅಭ್ಯರ್ಥಿ ಹೆಸರು ಘೋಷಣೆಯಾಗಿದೆ. ವೃತ್ತಿಯಲ್ಲಿ ವಕೀಲೆಯಾಗಿರುವ ಕೋಲ್ಕತ್ತಾ ಮೂಲದ ಪ್ರಿಯಾಂಕ ತಿಬ್ರಿವಾಲ್ ಬಿಜೆಪಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.