ಲಂಚದ ಹಣವನ್ನು ಫೋನ್ ಪೇ ಮೂಲಕ ಪಡೆದ ಜಿಲ್ಲೆಯ ಗುಬ್ಬಿ ಪಟ್ಟಣ ಠಾಣೆಯ ಪಿಎಸ್ ಐ ಜ್ಞಾನಮೂರ್ತಿಯನ್ನು ಅಮಾನತುಗೊಳಿಸಲಾಗಿದೆ.
ಎಸ್ಪಿ ರಾಹುಲ್ ಕುಮಾರ್ ಶಹಾಪೂರ್ ಆದೇಶ ಹೊರಡಿಸಿದ್ದಾರೆ. ಒಂದು ವಾರದ ವಿನಾಕಾರಣ ಮ್ಯಾಕ್ಸಿಕ್ಯಾಬ್ ವೊಂದನ್ನು ತಡೆದು ಚಾಲಕನಿಗೆ ಕಿರುಕುಳ ನೀಡಿದ ಆರೋಪವನ್ನು ಪಿಎಸ್ಐ ಎದುರಿಸುತ್ತಿದ್ದರು.
ಕ್ಯಾಬ್ ಚಾಲಕನಿಂದ 7 ಸಾವಿರ ರೂ. ಲಂಚವನ್ನು ಫೋನ್ ಪೇ ಮೂಲಕ ಪಿಎಸ್ಐ ಪಡೆದುಕೊಂಡಿದ್ದರು. ಜೀಪ್ ಚಾಲಕ ಕರಿಯಪ್ಪರ ಮೊಬೈಲ್ ನಂಬರಿಗೆ ಪಿಎಸ್ಐ ಲಂಚದ ಹಣವನ್ನು ಫೋನ್ ಪೇ ಮಾಡಿಸಿಕೊಂಡದ್ದರು. ಪಿಎಸ್ಐ ದೌರ್ಜನ್ಯ ಖಂಡಿಸಿ ಚಾಲಕರು ಪ್ರತಿಭಟನೆ ನಡೆಸಿದ್ದರು.
ಈ ಹಿನ್ನೆಲೆಯಲ್ಲಿ ಪಿಎಸ್ಐ ಜ್ಞಾನಮೂರ್ತಿಯನ್ನು ಅಮಾನತ್ತು ಮಾಡಿ ತುಮಕೂರು ಎಸ್ಪಿ ಆದೇಶಿಸಿದ್ದಾರೆ.