ಇತ್ತೀಚಿನ ದಿನಗಳಲ್ಲಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹಿಂದೂ ದೇವಾಲಯಗಳ ತೆರವು ಸೂಚನೆ ವಿಚಾರ ಸಾಕಷ್ಟು ವಿವಾದಕ್ಕೆ ಕಾರಣವಾಗಿರುವ ಸಮಯದಲ್ಲೇ ಸಾರ್ವಜನಿಕರ ಪ್ರತಿಭಟನೆಗೆ ಬೆಚ್ಚಿರುವ ಸ್ಥಳೀಯ ಆಡಳಿತವು ತೆರವು ಕಾರ್ಯಾಚರಣೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಿದೆ.
ಈ ಮಧ್ಯೆ ಹಿಂದೂಗಳನ್ನು ಜಾಗೃತಗೊಳಿಸುವ ಉದ್ದೇಶದಿಂದ ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಭಾರತದ ಕ್ಷೇತ್ರ ಸಂಚಾಲಕ ಜಗದೀಶ್ ಕಾರಂತ್ ಸೆಪ್ಟೆಂಬರ್ ೧೬ರಂದು ಮೈಸೂರಿಗೆ ಭೇಟಿ ನೀಡಲಿದ್ದಾರೆ.
ಮೇಲಧಿಕಾರಿಗಳ ಸೂಚನೆ ಹಿನ್ನೆಲೆಯಲ್ಲಿ, ಮುಂದಿನ ಆದೇಶದವರೆಗೆ ಪಾಲಿಕೆ ಅಧಿಕಾರಿಗಳು ದೇಗುಲಗಳ ತೆರವು ಕಾರ್ಯವನ್ನು ನಿಲ್ಲಿಸಿದ್ದಾರೆ. ಇದರಿಂದ ತೆರವು ಪಟ್ಟಿಯಲ್ಲಿರುವ ೯೩ ಹಿಂದೂ ಧಾರ್ಮಿಕ ಕೇಂದ್ರಗಳ ಪ್ರಮುಖರು ನಿಟ್ಟುಸಿರುಬಿಡುವಂತಾಗಿದೆ. ದೇವಾಲಯಗಳ ಉಳಿವಿಗಾಗಿ ಹಿಂದೂ ಸಂಘಟನೆಗಳು ಜಾಗೃತಗೊಂಡಿವೆ.
ಜಿಲ್ಲಾಡಳಿತದ ವಿರುದ್ಧ ಬೃಹತ್ ಪ್ರತಿಭಟನೆ ಮಾಡಲು ಹಿಂದೂ ಜಾಗರಣ ವೇದಿಕೆ ಸಿದ್ಧತೆ ನಡೆಸಿದೆ. ಮೈಸೂರಿನ ಅರಮನೆ ಕೋಟೆ ಆಂಜನೇಯ ದೇವಾಲಯದ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆಗೆ ಮುಂದಾಗಿದೆ. ಈ ಹಿನ್ನೆಲೆಯಲ್ಲೇ ಜಗದೀಶ್ ಕಾರಂತ್ ೧೬ರಂದು ನಗರಕ್ಕೆ ಬಂದು ಹಿಂದೂಗಳನ್ನುದ್ದೇಶಿಸಿ ಭಾಷಣ ಮಾಡುವರೆಂದು ಆಯೋಜಕರು ತಿಳಿಸಿದ್ದಾರೆ.
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ