ಅಕ್ರಮ ಜಾಗವನ್ನು ಬಿಜೆಪಿ ಸರ್ಕಾರ ದೊಡ್ಡ, ದೊಡ್ಡವರಿಗೆ ಸಕ್ರಮ ಮಾಡಿಕೊಟ್ಟಿಲ್ಲವಾ ಎಂದು ಪ್ರಶ್ನಿಸಿರುವ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಯು.ಟಿ.ಖಾದರ್, ದೇವಸ್ಥಾನದ ಜಾಗ ಸಕ್ರಮ ಮಾಡಲು ಸರ್ಕಾರಕ್ಕೆ ತೊಂದರೆ ಏನು ಎಂದು ಕೇಳಿದ್ದಾರೆ.
ಮಂಗಳೂರಿನಲ್ಲಿ ವರದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವರು, ಆದೇಶ ಕೊಡುವಾಗ ಸರ್ಕಾರ ಏಕೆ ಯೋಚನೆ ಮಾಡಿಲ್ಲ ಎಂದರು. ಈ ಬಗ್ಗೆ ಕೂತು ಚರ್ಚೆನಡೆಸಿದ್ದರೆ ಪರಿಹಾರ ಸಿಗುತ್ತಾ ಇರಲಿಲ್ಲವಾ ಎಂದಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ದೇವಸ್ಥಾನ ತೆರವು ಸಂಬಂಧ ಉದ್ಭವಿಸಿದ ವಿವಾದದ ಬಗ್ಗೆ ಖಾದರ್ ಪ್ರತಿಕ್ರಿಯಿಸಿ, ಮೈಸೂರು ಅಷ್ಟೇ ಅಲ್ಲ, ಇದು ಇಡೀ ದೇಶಕ್ಕೆ ದೊಡ್ಡಕಪ್ಪು ಚುಕ್ಕೆ. ಇದರ ನೈತಿಕ ಜವಾಬ್ದಾರಿ ಹೊತ್ತು ಅಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ದೇವಸ್ಥಾನ ಕೆಡವಿದ್ದರ ಬಗ್ಗೆ ಯಾರನ್ನು ಸರ್ಕಾರ ಜವಾಬ್ದಾರಿ ಮಾಡುತ್ತೆ? ದೇವಸ್ಥಾನದ ಇತಿಹಾಸ, ಅಲ್ಲಿನ ಶಿಲ್ಪಕಲೆಗಳ ಕುರಿತು ಅವರಿಗೆ (ಬಿಜೆಪಿಯವರಿಗೆ) ಗೊತ್ತಾಗಿಲ್ವಾ ಎಂದು ಪ್ರಶ್ನಿಸಿದ್ದಾರೆ.
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ