ಸಮುದ್ರದ ಅಲೆಗಳ ಮಧ್ಯೆ ಕಲ್ಲುಬಂಡೆಯ ಮೇಲೆ ಧ್ಯಾನದಲ್ಲಿ ಕುಳಿತಂತೆ ಫೋಟೊಗೆ ಪೋಸ್ ಕೊಡಲು ಹೋಗಿ ಪ್ರವಾಸಿಗನೊಬ್ಬ ಸಮುದ್ರ ಪಾಲಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾದ ವನ್ನಳ್ಳಿ ಕಡಲ ತೀರದಲ್ಲಿ ದುರಂತ ನಡೆದಿದೆ.
ಶಿರಸಿಯ ನಿವಾಸಿ 42 ವರ್ಷದ ಸುಬ್ಬುಗೌಡ ಮೃತ ಪ್ರವಾಸಿಗ.
ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ಸುಬ್ಬುಗೌಡ, ಕಡಲ ತೀರದ ಬಂಡೆ ಮೇಲೆ ಕುಳಿತು ಫೋಟೋಗೆ ಪೋಸ್ ಕೊಡುತ್ತಿದ್ದರು. ಈ ವೇಳೆ ರಭಸವಾಗಿ ಬಂದ ಅಲೆಯಲ್ಲಿ ಕೊಚ್ಚಿ ಹೋಗಿದ್ದಾರೆ.
ಮಳೆ ಹೆಚ್ಚಾಗುತ್ತಿರುವುದರಿಂದ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ. ಬೃಹತ್ ಗಾತ್ರದ ಅಲೆಗಳು ಕಡಲಿಗೆ ಅಪ್ಪಳಿಸುತ್ತಿವೆ. ಇದಾವುದನ್ನೂ ಅರಿಯದ ಪ್ರವಾಸಿಗರು, ಸಮುದ್ರದ ತಟದಲ್ಲಿ ಫೋಟೋಗೆ ಪೋಸ್ ಕೊಡಲು ಮುಂದಾಗುತ್ತಾರೆ. ಅದೇ ರೀತಿ ಪೋಸ್ ಕೊಡಲು ಹೋಗಿ ವ್ಯಕ್ತಿ ಇದೀಗ ಸಮುದ್ರದ ಪಾಲಾಗಿದ್ದಾರೆ.
ಘಟನೆ ಸಂಬಂಧ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು