ಕಾಂಗ್ರೆಸ್ನಿಂದ 20 ಶಾಸಕರನ್ನು ಬಿಜೆಪಿಗೆ ಕರೆದು ತರುವ ಜವಾಬ್ದಾರಿ ಯನ್ನು ಸಚಿವ ಮುನಿರತ್ನಗೆ ವಹಿಸಲಾಗಿದೆ. ಬೆಂಗಳೂರಿನಲ್ಲಿ ನಡೆದ ಒಬಿಸಿ ಮೋರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಈ ಬಾಂಬ್ ಸಿಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ 20 ಜನ ಶಾಸಕರು ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ. ಆ ಇಪ್ಪತ್ತು ಶಾಸಕರನ್ನು ಕರೆತರುವ ಜವಾಬ್ದಾರಿಯನ್ನು ಮುನಿರತ್ನಗೆ ನೀಡಲಾಗಿದೆ ಎಂದರು.
ಕಾಂಗ್ರೆಸ್ನಲ್ಲಿ ಹಿಂದುಳಿದ ವರ್ಗದ ಶಾಸಕರಿಗೆ ಭವಿಷ್ಯವಿಲ್ಲ. ಈಗಾಗಲೇ ಕಾಂಗ್ರೆಸ್ನಿಂದ 17 ಶಾಸಕರು ಬಿಜೆಪಿಗೆ ಬಂದಿದ್ದಾರೆ, ಮುಂದೆ ಇನ್ನಷ್ಟು ಹಿಂದುಳಿದ ಕಾಂಗ್ರೆಸ್ ನಾಯಕರು ಬಿಜೆಪಿಗೆ ಬರುತ್ತಾರೆ ಎಂದು ಹೇಳಿದ್ದಾರೆ.