ಕೇಂದ್ರ ಸರ್ಕಾರದ ಕೃಷಿ ಬಿಲ್ ಕುರಿತ ಲಾಭ-ನಷ್ಟದ ಚರ್ಚೆಯಾಗಲಿ. ಹೋರಾಟಮಾಡುತ್ತಿರುವವರು ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂದು ಕೇಂದ್ರದ ಕೃಷಿ, ರೈತ, ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು.
ಸೆಪ್ಟೆಂಬರ್ 27 ರಂದು ರೈತ ಸಂಘಟನೆಗಳು ಕರೆದಿರುವ ಭಾರತ್ ಬಂದ್ ಕುರಿತು ಉಡುಪಿಯಲ್ಲಿ ವರದಿಗಾರರೊಂದಿಗೆ ಸಚಿವರು ಮಾತನಾಡಿದರು. ಬಿಲ್ನ ಸಾಧಕ-ಬಾಧಕ ಚರ್ಚಿಸದೆ ಅದು ಸರಿಯಿಲ್ಲ ಎಂದು ರೈತಪರ ಹೋರಾಟಗಾರರು ಹೇಗೆ ನಿರ್ಧರಿಸುತ್ತಾರೆ ಎಂದು ಪ್ರಶ್ನಿಸಿದರು.
ರೈತ ಹೋರಾಟಗಾರರ ಜತೆ 11 ಸುತ್ತಿನ ಚರ್ಚೆ ನಡೆದಿದೆ. ಮತ್ತೆ ಮಾತುಕತೆಗೆ ಕೇಂದ್ರ ಸರ್ಕಾರ ಸಿದ್ಧವಿದೆ ಎಂದರು. ಕೇಂದ್ರದ ಕೃಷಿ ಬಿಲ್ ಅನುಷ್ಠಾನಗೊಳಿಸಿದ ರಾಜ್ಯಗಳ ರೈತರಿಗೆ ಲಾಭವಾಗಿದೆ. ಹೋರಾಟ ಮಾಡುವವರು ಈ ವರದಿಯನ್ನು ತರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ರೈತರ ವಿಷಯದಲ್ಲಿ ರಾಜಕೀಯ ಬೇಡ. ದೇಶಕ್ಕೆ ಅನ್ನಕೊಡುವ ರೈತರೊಂದಿಗೆ ಚರ್ಚಿಸಲು ಸದಾಸಿದ್ಧ ಎಂದು ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದರು.
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್