ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ತಮ್ಮನ್ನು ಆಹ್ವಾನಿಸಿದ್ದಕ್ಕೆ
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಂಪುಟಕ್ಕೆ ಪತ್ರದ ಮೂಲಕ ಧನ್ಯವಾದ ಹೇಳಿದ್ದಾರೆ.
ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ನಿನ್ನೆ (ಸೆ. 28) ತಮ್ಮ ಆಹ್ವಾನ ಕುರಿತಂತೆ
ಅಧಿಕೃತ ಆದೇಶ ಹೊರಡಿಸಿರುವ ಈ ಸಂಭ್ರಮದ ವಿಚಾರಕ್ಕೆ ಎಸ್.ಎಂ. ಕೃಷ್ಣ ಬಸವರಾಜ ಬೊಮ್ಮಾಯಿ, ಮಂತ್ರಿಮಂಡಲಕ್ಕೆ ಧನ್ಯವಾದಗಳನ್ನು ತಿಳಿಸಿ, ಹಾಗೂ ನಾಡಿಗೆ ಒಳಿತಾಗಲಿ ಎಂದು ಶುಭಕೋರಿದ್ದಾರೆ.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರ ದೃಷ್ಟಿಯಿಂದ ಪ್ರತಿಷ್ಠಾನಗೊಂಡ ರೈತಾಪಿ ವರ್ಗವೆ ಅಧಿಕವಾಗಿರುವ ಮಂಡ್ಯ ಜಿಲ್ಲೆಯಿಂದ ಬಂದ ನಾನು ಈ ಬಾರಿ ದಸರಾ ಉದ್ಘಾಟಿಸುತ್ತಿರುವುದು ನನ್ನ ಬಾಳಿನ ಸುದೈವ. ತಾಯಿ ಚಾಮುಂಡೇಶ್ವರಿ ಮನುಕುಲಕ್ಕೆ ಬಂದಿರುವ ಕೊರೊನಾ ಮಹಾಮಾರಿಯಿಂದ ಮುಕ್ತಿಗೊಳಿಸಿ ನಾಡು ತಮ್ಮ ನೇತೃತ್ವದಲ್ಲಿ ಮತ್ತೆ ಅಭಿವೃದ್ಧಿಯೆಡೆಗೆ ಮುನ್ನಡೆಯಲಿ ಎಂದು ಆಶಿಸುತ್ತೇನೆ ಎಂದು ಶುಭಹಾರೈಸಿದ್ದಾರೆ
ಯದುವಂಶದ ಮಹಾರಾಜರುಗಳು ನಾಡಿನ ಸಾಂಸ್ಕೃತಿಕ ಹಿರಿಮೆಯನ್ನು ವಿಶ್ವಕ್ಕೆ ಪಸರಿಸಲು ಆ ಮೂಲಕ ನಾಡಿನ ಹಿರಿಮೆಯನ್ನು ಎತ್ತಿ ಹಿಡಿಯಲು ಪ್ರಾರಂಭಿಸಿದ ದಸರಾ ಸರಿಸುಮಾರು 400 ವರ್ಷಗಳನ್ನು ಕಳೆದರೂ ತನ್ನ ವೈಭವವನ್ನು ಕಳೆದುಕೊಂಡಿಲ್ಲ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ