February 19, 2026

Newsnap Kannada

The World at your finger tips!

nati souja

ಕಿರುತೆರೆ ನಟಿ ಸೌಜನ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ

Spread the love

ಕಿರುತೆರೆ ಧಾರಾವಾಹಿ ಹಾಗೂ ಕೆಲ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ನಟಿ ಸೌಜನ್ಯ (25) ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ದೊಡ್ಡಬೆಲೆಯಲ್ಲಿ ನಡೆದಿದೆ.

ಕುಂಬಳಗೋಡು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 4 ಪುಟಗಳ ಡೆತ್​ನೋಟ್​​ ಬರೆದಿಟ್ಟು ಅಪಾರ್ಟ್​​ಮೆಂಟ್​​ನಲ್ಲಿ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌

ದೊಡ್ಡ ಬೆಲೆ ಗ್ರಾಮದ ಸನ್​ ವರ್ಥ್​​ ಅಪಾರ್ಟ್​​ಮೆಂಟ್​ನಲ್ಲಿ ನಟಿ ಸೌಜನ್ಯ ವಾಸಿಸುತ್ತಿ ದ್ದರು.

ಇಂದು ಬೆಳಗ್ಗೆ ತನ್ನ ಗೆಳೆಯನೊಂದಿಗೆ ಊಟ ತರಲು ಹೇಳಿ ಮನೆಯಿಂದ ಹೊರಗೆ ಕಳುಹಿಸಿ, ಆತ ಮನೆಗೆ ವಾಪಸ್ ಬರೋ ವೇಳೆಗೆ ಆತ್ಮಹತ್ಯೆಗೆ ಶರಣಾಗಿದ್ದರಂತೆ.

ಅಪಾರ್ಟ್​​ಮೆಂಟ್​ಗೆ ಸೌಜನ್ಯ ಗೆಳೆಯ ವಾಪಸ್​ ಬಂದ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದೆ.

ನಟಿಯ ಶವದ ಬಳಿ ಪತ್ತೆಯಾಗಿದೆ. 4 ಪುಟಗಳ ಈ ಪತ್ರದಲ್ಲಿ ನನಗೆ ಸಾಕಷ್ಟು ಆರೋಗ್ಯ ಸಮಸ್ಯೆ ಇದೆ. ಆದರೆ ಯಾರಿಗೂ ಹೇಳಿಕೊಳ್ಳಲು ಆಗುತ್ತಿಲ್ಲ. ಸಾಕಷ್ಟು ಬಾರೀ ಚಿಕಿತ್ಸೆ ಪಡೆದುಕೊಂಡರು ಆಗುತ್ತಿಲ್ಲ. ಆದ್ದರಿಂದಲೇ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ. ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನನ್ನು ಕ್ಷಮಿಸಿ ಬಿಡಿ ಎಂದು ಪತ್ರದಲ್ಲಿ ತಂದೆ-ತಾಯಿ ಬಳಿ ಕ್ಷಮೆ ಕೇಳಿದ್ದಾರೆ ಎನ್ನಲಾಗಿದೆ.

ಕೊಡಗಿನ ಕುಶಾಲನಗರದ ಸೌಜನ್ಯ ಅವರು ತಮ್ಮ ಗೆಳೆಯನೊಂದಿಗೆ ಕಳೆದ ಕೆಲ ತಿಂಗಳಿನಿಂದ ಅಪಾರ್ಟ್​​ಮೆಂಟ್​​​ನಲ್ಲಿ ವಾಸಿಸುತ್ತಿದ್ದರು. ಕನ್ನಡದ ಹಲವು ಧಾರಾವಾಹಿ ಹಾಗೂ ಚೌಕಟ್ಟು ಮತ್ತೆ ಫನ್​​ ಸಿನಿಮಾಗಳಲ್ಲಿ ನಟಿಸಿದ್ದರು.

error: Content is protected !!