ವಿಶ್ವವಿಖ್ಯಾತ, ಐತಿಹಾಸಿಕ ನಾಡಿನ ಹೆಮ್ಮೆಯ ‘ಮೈಸೂರು ದಸರಾ -2021’ರ ಮಹೋತ್ಸವಕ್ಕೆ ಹಿರಿಯ ಮುತ್ಸದ್ದಿ, ಮಾಜಿ ಸಿಎಂ ಎಸ್.ಎಂ.ಕೃಷ್ಣ 411ನೇ ನಾಡಹಬ್ಬ ದಸರಾ ಹಬ್ಬಕ್ಕೆ ಚಾಲನೆ ನೀಡಿದರು.

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ದೀಪಾ ಬೆಳಗುವ ಮೂಲಕ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಗುರುವಾರ ಬೆಳಿಗ್ಗೆ 8.26 ಪುಷ್ಪಾಚ೯ನೆ ಮಾಡಿ ಚಾಲನೆ ನೀಡಿದರು.
ದಸರಾ ಉತ್ಸವ ಕ್ಕೆ ಚಾಲನೆ ನೀಡಿ ಮಾತನಾಡಿದ ಎಸ್ ಎಂ ಕೃಷ್ಣ ,
ಮನುಕುಲಕ್ಕೆ ಬಂದಿರುವ ದೊಡ್ಡ ಗಂಡಂತಾರ ಕೊರೋನಾ ಅನ್ನು ಸಂಪೂಣ೯ವಾಗಿ ತೊಲಗಿಸಿ, ಜನರನ್ನು ರಕ್ಷಣೆ ಮಾಡುವಂತೆ ಮೈಸೂರಿನ ಅಧಿದೇವತೆ ತಾಯಿ ಚಾಮುಂಡೇಶ್ವರಿ ಮಾತೆಯಲ್ಲಿ ಪ್ರಾಥಿ೯ಸಿರುವುದಾಗಿ ಹೇಳಿದರು.
ತಮ್ಮ ಹಾಗೂ ಮೈಸೂರಿನ ನಡುವೆ ಇದ್ದ ಅವಿನವಭಾವ ಸಂಬಂಧದವನ್ನು ಸ್ಮರಿಸಿದ ಕೃಷ್ಣ, ಬಾಲ್ಯದಲ್ಲಿ ತಾವು ಕಲಿತ ಶಾಲೆ ಕಾಲೇಜು ದಿನಗಳ ಬಗ್ಗೆಯೂ ವಿವರವಾಗಿ ಹೇಳಿ, ತಮ್ಮ ತಂದೆ ಎಸ್ ಸಿ ಮಲ್ಲಯ್ಯನವರು ಪ್ರಜಾಪ್ರತಿನಿಧಿ ಸದಸ್ಯರಾಗಿದ್ದರಿಂದ ಮೈಸೂರು ದಸರಾ ವೈಭವವನ್ನು ಹತ್ತಿರದಿಂದ ನೋಡಿಕೊಂಡು ಬಂದ ನನಗೆ ಈ ಬಾರಿ ದಸರಾ ಉದ್ಘಾಟನೆಯ ಅವಕಾಶ ನೀಡಿದ ಸಿಎಂಗೆ ಧನ್ಯವಾದ ಹೇಳಿದರು.
ಈ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಸಚಿವರಾದ ಎಸ್.ಟಿ.ಸೋಮಶೇಖರ್, ಆರ್.ಅಶೋಕ್, ಬಿ.ಸಿ.ಪಾಟೀಲ್, ಶಿವರಾಂ ಹೆಬ್ಬಾರ್, ಸುನೀಲ್ ಕುಮಾರ್, ನಾರಾಯಣ ಗೌಡ, ಭೈರತಿ ಬಸವರಾಜು, ಶಶಿಕಲಾ ಜೊಲ್ಲೆ, ಶಾಸಕರಾದ ಜಿಟಿಡಿ, ರಾಮದಾಸ್, ನಾಗೇಂದ್ರ, ಬೆಲ್ಲದ್, ತನ್ವೀರ್ ಸೇಠ್, ಹೆಚ್.ವಿಶ್ವನಾಥ್, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಸೇರಿ ನಿಗಮ ಮಂಡಳಿ ಅಧ್ಯಕ್ಷರ ಹಲವರ ಗಣ್ಯರು ಉಪಸ್ಥಿತರಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ