ಶ್ರೀರಂಗಪಟ್ಟಣ ದಸರಾ ಆಚರಣೆ ವೇಳೆ ಪಟಾಕಿ ಶಬ್ದಕ್ಕೆ ಚಾಮುಂಡೇಶ್ವರಿ ಪ್ರತಿಮೆ ಹೊತ್ತು ಸಾಗುತ್ತಿದ್ದ ವೇಳೆ ಗೋಪಾಲಸ್ವಾಮಿ ಎಂಬ ಆನೆ ಬೆದರಿದ ಪರಿಣಾಮವಾಗಿ ಜನರು ಜೀವ ಉಳಿಸಿಕೊಳ್ಳಲು ಜನರು ಚೆಲ್ಲಾಪಿಲ್ಲಿಯಾದ ಘಟನೆ ಶನಿವಾರ ಮಧ್ಯಾಹ್ನ ಜರುಗಿದೆ.

ಶ್ರೀರಂಗಪಟ್ಟಣ ಬನ್ನಿಮಂಟಪದ ನಾಡ ದೇವಿಗೆ ಪುಷ್ಪಾರ್ಚನೆ ಆದ ಬಳಿಕ ಆನೆ ಬೆದರಿದೆ ಇದರಿಂದ ಜನ ಚೆಲ್ಲಾಪಿಲ್ಲಿಯಾದರು, ವಾದ್ಯ ಧ್ವನಿವರ್ಧಕಗಳನ್ನು ಬಂದ್ ಮಾಡಲಾಯಿತು, ಬಳಿಕ ಆನೆ ಸಮಾಧಾನಗೊಂಡಿದೆ.
ಆನೆ ಬೆದರಿದ ಹಿನ್ನಲೆಯಲ್ಲಿ ಜಂಬೂಸವಾರಿಯನ್ನು ಸ್ಥಗಿತಗೊಳಿಸಲಾಯಿತು,ನಂತರ ಆನೆ ಮೇಲೆ ಇದ್ದ ಮರದ ಅಂಬಾರಿಯನ್ನ ಕಳಚಿಟ್ಟಿದ್ದಾರೆ,ಗೋಪಾಲಸ್ವಾಮಿ ಆನೆಗೆ ಕಾಲಿಗೆ ಸರಪಳಿ ಹಾಕಲಾಗಿದೆ.
ಇತ್ತಿಚೆಗೆ ಮೈಸೂರಿನಲ್ಲಿ ಪಟಾಕಿ ಹಾಗೂ ಫಿರಂಗಿ ತಾಲೀಮು ವೇಳೆಯಲ್ಲೂ ಗೋಪಾಲಸ್ವಾಮಿ ಆನೆ ಹೆದರಿತ್ತು.
ಆನೆ ವೈದ್ಯ ರಮೇಶ್, ಪಶು ವೈದ್ಯ ಸಹಾಯಕ ಅಕ್ರಂ, ಮಾವುತರ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ, ಜಿಲ್ಲಾಡಳಿತ, ಪೊಲೀಸ್ ಇಲಾಖೆ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿ.
ಜಿಲ್ಲಾಡಳಿತದ ನಿರ್ಲಕ್ಷ್ಯತೆ, ಜನರನ್ನುನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ವಿಫಲ.
ಪೊಲೀಸ್ ವೈಫಲ್ಯಕ್ಕೆ ಮೊಟಕುಗೊಂಡ ಜಂಬೂ ಸವಾರಿ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ