ಬಾಕಿ ಇರುವ ಅರ್ಜಿಗಳ ತ್ವರಿತ ವಿಲೇವಾರಿಗೆ 11 ಶನಿವಾರಗಳಂದೂ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು ಕಾರ್ಯನಿರ್ವಹಿಸಿದರು. ಈ ರೀತಿಯ ಕೆಲಸ ಎಲ್ಲ ನ್ಯಾಯಾಲಯಗಳಲ್ಲೂ ಆಗಬೇಕು ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಅಭಯ್ ಎಸ್ ಓಕಾ ಹೇಳಿದರು.
ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕವಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಠಾಣೆ ಜಿಲ್ಲಾ ನ್ಯಾಯಾಲಯಗಳ ವಕೀಲರ ಸಂಘವು ಆಯೋಜಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ನ್ಯಾಯಮೂರ್ತಿ ಓಕಾ ಮಾತನಾಡಿದರು. ಕೋವಿಡ್ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್ ಕೆಲಸ ಮಾಡಿದ ರೀತಿಯನ್ನು ಈ ಸಂದರ್ಭದಲ್ಲಿ ಹೇಳಿದರು.
ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕವಾಗುವುದಕ್ಕೂ ಮುನ್ನ ನ್ಯಾ. ಓಕಾ ಅವರು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿದ್ದರು.
ಕೋವಿಡ್ ಪಿಡುಗಿನ ಕಾರಣದಿಂದ ಸಾಕಷ್ಟು ಸಂಖ್ಯೆಯ ಪ್ರಕರಣಗಳು ನ್ಯಾಯಾಲಯಗಳಲ್ಲಿ ಬಾಕಿ ಉಳಿದಿವೆ. ಅವುಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವುದೂ ಮುಖ್ಯ ಎಂದು ಅವರು ನುಡಿದರು.
ನ್ಯಾಯಾಂಗ ವ್ಯವಸ್ಥೆಯು ಈಗಿನ ಸಂದರ್ಭದಲ್ಲಿ ವಿಶ್ವಾಸಾರ್ಹತೆಯ ಕೊರತೆ ಎಂಬ ಸವಾಲನ್ನೂ ಎದುರಿಸುತ್ತಿದೆ ಎಂದು ನ್ಯಾ. ಓಕಾ ಅಭಿಪ್ರಾಯಪಟ್ಟರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು