ಪುನೀತ್ 2 ಗಂಟೆಗಳ ಜಿಮ್ ನಲ್ಲಿ ಕಸರತ್ತು ಮಾಡಿದ್ದಾರೆ. ತೀವ್ರ ಹೃದಯಾಘಾತವಾಗಿದೆ.
ಆಸ್ಪತ್ರೆಯಲ್ಲಿ ವೈದ್ಯರು ಸತತ 3 ಗಂಟೆಗಳ ಕಾಲ ಚಿಕಿತ್ಸೆ ನೀಡಿದ್ದರೂ ವೈದ್ಯರ ಪ್ರಯತ್ನಕ್ಕೆ ಪುನೀತ್ ರಾಜ್ಕುಮಾರ್ ದೇಹ ಸ್ಪಂದಿಸಲಿಲ್ಲ.
ಪ್ರತಿನಿತ್ಯ ಮಾಡುವಂತೆ ಇಂದೂ ಪುನೀತ್ ಜಿಮ್ನಲ್ಲಿ ಕಸರತ್ತು ನಡೆಸಿದ್ದಾರೆ. ಸತತ ಎರಡು ಗಂಟೆ ವ್ಯಾಯಾಮ ಮಾಡಿದ ಬಳಿಕ ಅವರಿಗೆ ಹೃದಯದಲ್ಲಿ ನೋವು ಕಾಣಿಸಿಕೊಂಡಿದೆ.
ವಿಕ್ರಂ ಆಸ್ಪತ್ರೆಯ ವೈದ್ಯ ಡಾ. ರಂಗನಾಥ್ ಮಾತನಾಡಿ, ಎದೆ ನೋವು ಎಂದು ಪುನೀತ್ ರಾಜ್ಕುಮಾರ್ ಅವರು ಕುಟುಂಬದ ವೈದ್ಯರ ಬಳಿ ಹೋಗಿದ್ದಾರೆ. ಅಲ್ಲಿ ಇಸಿಜಿ ಮಾಡಿಸಿದಾಗ ಹೃದಯಾಘಾತವಾಗಿರುವುದು ತಿಳಿದುಬಂದಿದೆ.
ಅಲ್ಲಿಂದ ನೇರವಾಗಿ ವಿಕ್ರಮ ಆಸ್ಪತ್ರೆಗೆ ಪುನೀತ್ ಅವರನ್ನು ಕರೆತರಲಾಗುತ್ತಿತ್ತು. ಮಾರ್ಗ ಮಧ್ಯೆದಲ್ಲಿಯೇ ಅವರಿಗೆ ಹಾರ್ಟ್
ಅಸಿಸ್ಟೋಲ್ (ಹೃದಯದ ಚಲನೆ ನಿಲ್ಲುವುದು) ಆಗಿತ್ತು. ಭಾರೀ ಹೃದಯಾಘಾತವೇ ಆಗಿತ್ತು ಎಂದು ಹೇಳಿದ್ದಾರೆ.
ಆದರೂ ಮೂರು ಗಂಟೆಗಳ ಕಾಲ ಅವರನ್ನು ವೆಂಟಿಲೇಟರ್ ನಲ್ಲಿ ಇಟ್ಟು ಬದುಕುಳಿಸಲು ನಾನಾ ರೀತಿಯಲ್ಲಿ ಪ್ರಯತ್ನ ಪಟ್ಟೆವು. ಹೃದಯ ಚಿಕಿತ್ಸೆಗೆ ಸಂಬಂಧಿಸಿದ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಿದೆವು. ಆದರೆ ಅವರಿಂದ ಯಾವುದೇ ರೀತಿಯ ಸ್ಪಂದನೆ ಸಿಗಲಿಲ್ಲ.
ವೈದ್ಯರ ತಂಡ ಸಾಕಷ್ಟು ಪ್ರಯತ್ನಪಟ್ಟರು ಅವರನ್ನು ಉಳಿಸಿಕೊಳ್ಳಲು ಆಗಲಿಲ್ಲ. ಶುಕ್ರವಾರ ಮಧ್ಯಾಹ್ನ 2.30ರ ಹೊತ್ತಿಗೆ ಪುನೀತ್ ರಾಜ್ಕುಮಾರ್ ಇನ್ನಿಲ್ಲ ಎಂಬ ಸುದ್ದಿಯನ್ನು ಘೋಷಿಸಲೇಬೇಕಾಯಿತು ಎಂದು ವೈದ್ಯರು ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು