ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ವಿಧಿವಶ ಹಿನ್ನೆಲೆ ಆಘಾತಕ್ಕೆ ಒಳಗಾದ ಮಂಡ್ಯ ಅಭಿಮಾನಿಯೊಬ್ಬರು ಸಾವನ್ನಪ್ಪಿದ್ದಾನೆ.
ಸಾವಿನ ಸುದ್ದಿ ನೋಡುತ್ತಲೇ ವೈ.ಎಸ್.ಸುರೇಶ್ (45) ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ವೈ.ಎಸ್. ಸುರೇಶ್ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಯಲಾದಹಳ್ಳಿ ಗ್ರಾಮದ ನಿವಾಸಿ.
ಬೆಳಗ್ಗಿನಿಂದಲೂ ಅಂತಿಮ ದರ್ಶನದ ಸುದ್ದಿ ನೋಡುತ್ತಿದ್ದರು. ಮಧ್ಯಾಹ್ನ ಏಕಾಏಕಿ ಕುಸಿದುಬಿದ್ದು ದಿಢೀರ್ ಅಸ್ವಸ್ಥರಾಗಿದ್ದಾರೆ.
ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡುವಾಗಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸುರೇಶ್ ಅವರು ಪುನೀತ್ ಅಭಿಮಾನಿ ಮಾತ್ರವಲ್ಲದೇ ರಾಜ್ ಕುಟುಂಬದ ಅಭಿಮಾನಿಯಾಗಿದ್ದರು.. ಸಿನಿಮಾ ರಂಗದಲ್ಲಿ ಗುರುತಿಸಿಕೊಳ್ಳುವ ಪ್ರಯತ್ನದಲ್ಲಿದ್ದರು. ಒಂದೆರಡು ಸಿನಿಮಾಗೆ ಚಿತ್ರಕಥೆಯನ್ನೂ ಬರೆದಿದ್ದರು ಎನ್ನಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು