BBMP ಕೇಂದ್ರ ಕಚೇರಿ ಆವರಣದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಪುತ್ಥಳಿ ನಿರ್ಮಾಣ ಆಗಲಿದೆ.
ಪುನೀತ್ ರಾಜ್ ಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಪಾಲಿಕೆ ನೌಕರರು ಒತ್ತಾಯ ಮಾಡಿದ್ದು, ಅನುಮತಿ ಕೋರಿ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪಾಲಿಕೆ ನೌಕರರ ಸಂಘ ಮನವಿ ಮಾಡಿದೆ. ಸದ್ಯ ನೌಕರರ ಮನವಿ ಸ್ವೀಕರಿಸಿರುವ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಪುನೀತ್ ಪುತ್ಥಳಿ ನಿರ್ಮಾಣದ ಭರವಸೆಯನ್ನು ನೀಡಿದ್ದಾರೆ.
ಸರ್ಕಾರಕ್ಕೆ ಮಾಹಿತಿ ನೀಡಿ ಅನುಮತಿ ಕೊಡಿಸುವ ಭರವಸೆಯನ್ನು ನೀಡಿದ್ದಾರೆ.
ಒಂದು ವೇಳೆ ಸರ್ಕಾರ ಅನುಮತಿ ಕೊಟ್ಟರೆ ಶೀಘ್ರದಲ್ಲೇ ಪಾಲಿಕೆ ಆವರಣದಲ್ಲಿ ಪವರ್ ಸ್ಟಾರ್ ಪ್ರತಿಮೆ ತಲೆ ಎತ್ತಲಿದೆ. ಸದ್ಯ ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿ ಡಾ.ರಾಜ್ ಕುಮಾರ್, ಡಾ.ಬಿ.ಆರ್.ಅಂಬೇಡ್ಕರ್ ಸೇರಿ ನಾಲ್ಕು ಪುತ್ಥಳಿ ನಿರ್ಮಾಣ ಮಾಡಲಾಗಿದೆ. ಇದೀಗ ಪುನೀತ್ ರಾಜ್ ಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಬಿಬಿಎಂಪಿ ಒಲವು ತೋರಿದೆ.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ