ಅಪ್ಪು ಸಮಾಧಿ ದರ್ಶನಕ್ಕೆ ಸಾರ್ವಜನಿಕರಿಗೆ ಇಂದಿನಿಂದಲೇ ಅವಕಾಶ ನೀಡಲಾಗುವುದು ಎಂದು ರಾಘವೇಂದ್ರ ರಾಜ್ಕುಮಾರ್ ಹೇಳಿದರು.
ಕಂಠೀರವ ಸ್ಟುಡಿಯೋ ದಲ್ಲಿನ ಅಪ್ಪು ಸಮಾಧಿ ಗೆ ಹಾಲು ತುಪ್ಪ ಕಾರ್ಯ ನೆರವೇರಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ರಾಘವೇಂದ್ರ , ಪುನೀತ್ರ ಐದನೇ ದಿನದ ಕಾರ್ಯವನ್ನು ಇವತ್ತು ಪೂರ್ಣ ಮಾಡಿದ್ದೇವೆ. ಮುಂದೇ 11ನೇ ದಿನದ ಕಾರ್ಯದ ಬಗ್ಗೆ ಮಾಹಿತಿ ನೀಡುತ್ತೇವೆ ಎಂದರು.
ಅಪ್ಪು ಕಳೆದುಕೊಂಡ ನೋವಿನೊಂದಿಗೆ ನಾವು ಬದುಕುತ್ತೇವೆ. ನಮಗೆ ಬೇರೆ ದಾರಿ ಇಲ್ಲ, ಆಯ್ಕೆಗಳೂ ಇಲ್ಲ. ಈ ನೋವನ್ನು ಬರಿಸುವ ಶಕ್ತಿಯನ್ನು ಭಗವಂತ ನಮಗೆ ಕೊಡಲಿ ಎಂದರು.
ಪುನೀತ್ ಹೆಸರನ್ನು ಸಾಗರ ಪಟ್ಟಣದ ಒಂದು ಸರ್ಕಲ್ಗೆ, ಶಿವಮೊಗ್ಗದ ರಸ್ತೆಗೆ ಇಟ್ಟಿರೋದು ಖುಷಿ ಕೊಟ್ಟಿದೆ ಎಂದು ಹೇಳಿದರು
ಸಾರ್ವಜನಿಕ ದರ್ಶನಕ್ಕೆ ಇವತ್ತೇ ಅವಕಾಶ ಕೊಡ್ತೀವಿ. ಪುನೀತ್ ರಾಜ್ ಕುಮಾರ್ ಸಮಾಧಿಗೆ ಇಂದಿನಿಂದ ಅಭಿಮಾನಿಗಳಿಗೆ ಪ್ರವೇಶ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು