ಪುನೀತ್​​ ಗೆ ಚಿತ್ರದುರ್ಗದ ಪ್ರತಿಷ್ಠಿತ ‘ಬಸವಶ್ರೀ’ ಪ್ರಶಸ್ತಿ ಪ್ರಕಟ

Team Newsnap
1 Min Read

ಹೃದಯಾಘಾತದಿಂದ ನಿಧನರಾದ ಪವರ್​​ ಸ್ಟಾರ್​​​ ಪುನೀತ್​​ ರಾಜಕುಮಾರ್​​ ಅವರಿಗೆ ಈ ಬಾರಿಯ ಬಸವಶ್ರೀ ಪ್ರಶಸ್ತಿ ಘೋಷಿಸಲಾಗಿದೆ.

2022ನೇ‌ ಸಾಲಿನ ಬಸವಶ್ರೀ ಪ್ರಶಸ್ತಿಯನ್ನು ಚಿತ್ರದುಗ೯ದ ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿಯವರು ಪುನೀತ್​​​ ಅವರಿಗೆ ನೀಡುವುದಾಗಿ ಪ್ರಕಟಸಿದರು.

ಮುಂದಿನ ಬಸವ ಜಯಂತಿ ದಿನ ಬಸವಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.

ಮುರುಘಾಮಠದ ಅನುಭವ ಮಂಟಪದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಪುನೀತ್ ಪತ್ನಿ ಅಶ್ವಿನಿ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಬಸವಶ್ರೀ ಪ್ರಶಸ್ತಿ’ ಮೊತ್ತ 5 ಲಕ್ಷ ರೂ. ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದ . ಕಾರ್ಯಕ್ರಮಕ್ಕೆ ಡಾ. ಶಿವರಾಜಕುಮಾರ್​​​ ಅವರನ್ನು ಆಹ್ವಾನಿಸಲಾಗುವುದು ಎಂದು ಪೀಠಾಧಿಪತಿ ಡಾ. ಶಿವಮೂರ್ತಿ ಸ್ವಾಮಿಜೀಗಳು ತಿಳಿಸಿದರು.

Share This Article
Leave a comment