ಜೈಪುರನಲ್ಲಿ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಅಮಾನತುಗೊಂಡಿದ್ದ ನ್ಯಾಯಾಧೀಶರೊಬ್ಬರನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ.
ಜಿತೇಂದ್ರ ಸಿಂಗ್ ಬಂಧಿತ ಆರೋಪಿ. ಇವರನ್ನು ಜೈಪುರದಿಂದ ಭಾರತ್ಪುರಕ್ಕೆ ಕರೆತರಲಾಗಿದೆ.
ಸಿಂಗ್ ಅವರು ಭ್ರಷ್ಟಾಚಾರ ವಿರೋಧಿ ಪ್ರಕರಣಗಳ ವಿಶೇಷ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಆರೋಪಿ ಸಿಂಗ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನ್ಯಾಯಾಧೀಶರ ಸ್ಟೆನೋಗ್ರಾಫರ್ ಅಂಶುಲ್ ಸೋನಿ ಹಾಗೂ ನ್ಯಾಯಾಲಯದ ಸಿಬ್ಬಂದಿ ರಾಹುಲ್ ಕತಾರ ಮತ್ತಿಬ್ಬರು ಆರೋಪಿಗಳಾಗಿದ್ದಾರೆ.
14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಜಿತೇಂದ್ರ ಸಿಂಗ್ ವಿರುದ್ಧ ಆರೋಪ ಕೇಳಿಬಂದಿತ್ತು. ಎಫ್ಐಆರ್ ಆಧರಿಸಿ ರಾಜಸ್ಥಾನ್ ಕೋರ್ಟ್ ಆರೋಪಿಯನ್ನು ಅಮಾನತುಗೊಳಿಸಿತ್ತು. ಅಲ್ಲದೇ ಪ್ರಕರಣದ ತನಿಖೆಗೆ ತಂಡವೊಂದನ್ನು ನೇಮಿಸಿತ್ತು.
ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಸಿಂಗ್ ಅವರನ್ನು ವಿಚಾರಣೆಗೊಳಪಡಿಸಲಾಯಿತು. ನಂತರ ಸುಪ್ರೀಂ ಕೋರ್ಟ್ ಮಾರ್ಗಸೂಚಿಯನ್ವಯ ಅವರನ್ನು ಬಂಧಿಸಲಾಯಿತು ಎಂದು ಭಾರತ್ಪುರ ಎಸ್ಪಿ ದೇವೇಂದ್ರಕುಮಾರ್ ಬಿಶ್ನೋಯ್ ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ