ರಾಮರಾಜ್ಯ, ಜೈ ಶ್ರೀರಾಮ್ ಎಂದ ಘೋಷಣೆ ಕೂಗುವವರು ಋಷಿಗಳಲ್ಲ, ರಾಕ್ಷಸರು…ಹೀಗೆಂದು ಹೇಳಿದವರು ಕಾಂಗ್ರೆಸ್ ನಾಯಕ ರಶೀದ್ ಅಲ್ವಿ. ಇವರ ಈ ಹೇಳಿಕೆಗೆ ದೇಶದಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ.
ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ್ದ ರಶೀದ್ ಅಲ್ವಿ.. ಈ ದೇಶದಲ್ಲಿ ರಾಮರಾಜ್ಯ ಆಗಬೇಕು ಅನ್ನೋದು ನಮಗೂ ಇದೆ. ಮೇಕೆಗಳು ಮತ್ತು ಸಿಂಹಗಳು ನೀರು ಕುಡಿಯುವ ರಾಜ್ಯದಲ್ಲಿ ದ್ವೇಷ ಹೇಗೆ ಉಂಟಾಗುತ್ತದೆ? ಎಂದು ಪ್ರಶ್ನೆ ಮಾಡಿದರು
ಈ ದೇಶದಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗುವ ಮೂಲಕ ಜನರನ್ನು ದಾರಿ ತಪ್ಪಿಸುವವರ ಬಗ್ಗೆ ಎಚ್ಚರದಿಂದಿರಬೇಕು ಎಂದಿದ್ದಾರೆ.
ಭಾರತ ದೇಶದಲ್ಲಿ ರಾಮರಾಜ್ಯ ಇದೆ ಅಂತಾ ಹೇಳ್ತೀವಿ. ಆದರೆ ರಾಮರಾಜ್ಯ ಹೇಗೆ ಇರಬೇಕು? ಜೈ ಶ್ರೀರಾಮ್ ಎಂದು ಘೋಷಣೆ ಕೂಗುವವರು ರಾಮಾಯಣದ ಕಾಲನೇಮಿ ರಾಕ್ಷಸರು ಎಂದು ವಿವಾದಾತ್ಮಕ ಹೇಳಿಕೆಯನ್ನು ಹರಿಬಿಟ್ಟಿದ್ದಾರೆ.
- ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ