ಕಾನ್ಸ್ಟೇಬಲ್ ಒಬ್ಬರು ದೆವ್ವಕ್ಕೆ ಹೆದರಿ ತಮ್ಮ ಪೊಲೀಸ್ ಕ್ವಾರ್ಟರ್ಸ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ನಡೆದಿದೆ.
ಪ್ರಭಾಕರನ್ ಮೃತ ಪೇದೆ ಈತ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದರು.
ಇವರು ಕನಸಿನಲ್ಲಿ ಬರುವ ದೆವ್ವಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರಭಾಕರನ್ ಕನಸಿನಲ್ಲಿ ಬೆಂಕಿಯಲ್ಲಿ ಸುಟ್ಟುಹೋದ ಮಹಿಳೆಯೊಬ್ಬರು ಬಂದು ಕತ್ತು ಹಿಸುಕಲು ಪ್ರಯತ್ನಿಸಿದ್ದಳು. ಯಾಕೆ ತನಗೆ ಹೀಗೆ ಕನಸು ಬೀಳುತ್ತಿದೆ ಎಂಬ ಬಗ್ಗೆ ಪ್ರಭಾಕರನ್ ಜ್ಯೋತಿಷಿಯನ್ನು ಸಂಪರ್ಕಿಸಿದ್ದರು. ಅವರು ಇದು ಪ್ರೇತ ಕಾಟವಿರಬಹುದು ಎಂದಿದ್ದರು.
ಹೀಗಾಗಿ 15 ದಿನಗಳ ಕಾಲ ಅನಾರೋಗ್ಯದ ರಜೆ ಪಡೆದಿದ್ದ ಪ್ರಭಾಕರನ್ ತನ್ನ ಪೊಲೀಸ್ ಕ್ವಾರ್ಟರ್ಸ್ನ ಪೂಜಾ ಕೊಠಡಿಯಲ್ಲಿ ಬೀಗ ಹಾಕಿಕೊಂಡಿದ್ದರು.
ಪ್ರಭಾಕರನ್ ಪತ್ನಿ ಮತ್ತು ಮಕ್ಕಳನ್ನು ಸಂಬಂಧಿಕರ ಮನೆಗೆ ಹೋಗಿದ್ದರು. ಇವರು ಮನೆಗೆ ಹಿಂತಿರುಗಿದಾಗ ಪ್ರಭಾಕರನ್ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ ಆಗಿದ್ದರು.
ಕನಸಿನಲ್ಲಿ ಕಾಡುತ್ತಿದ್ದ ದೆವ್ವದ ಭಯದಿಂದ ಪ್ರಭಾಕರನ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕ್ವಾರ್ಟರ್ಸ್ನಲ್ಲಿ ಮಹಿಳೆಯೊಬ್ಬರು ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದರು ಎಂದು ಪ್ರಭಾಕರನ್ ಮನೆಯವರ ಬಳಿ ಹೇಳಿದ್ದಾರೆ. ಈ ಕುರಿತಾಗಿ ಕಡಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ