ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯ ಸೆಮಿಫೈನಲ್ನಲ್ಲಿ ವಿದರ್ಭ ತಂಡದ ವಿರುದ್ಧ ಕರ್ನಾಟಕ 4 ರನ್ಗಳ ರೋಚಕ ಜಯ ಸಾಧಿಸಿದೆ.
ಈ ಮೂಲಕ ಫೈನಲ್ಗೆ ಲಗ್ಗೆಯಿಟ್ಟಿದೆ. ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ವಿದರ್ಭ ತಂಡಕ್ಕೆ 177 ರನ್ಗಳ ಕಠಿಣ ಗುರಿ ನೀಡಿತ್ತು.
ಈ ಗುರಿ ಬೆನ್ನತ್ತಿದ ವಿದರ್ಭ ತಂಡವು ನಿಗದಿತ 20 ಓವರ್ನಲ್ಲಿ 6 ವಿಕೆಟ್ ನಷ್ಟಕ್ಕೆ 172 ರನ್ ಪೇರಿಸಿತು. ಟಾರ್ಗೆಟ್ ರೀಚ್ ಮಾಡಲಾಗದೆ ವಿದರ್ಭ ಕೊನೆಗೂ ಕರ್ನಾಟಕ ಎದುರು ಸೋಲುಂಡಿತ್ತು.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ಪರ ನಾಯಕ ಮನೀಶ್ ಪಾಂಡೆ 54, ರೋಹನ್ ಕದಂ 87 ಗಳಿಸಿದರು. ಅಭಿನವ್ ಮನೋಹರ್ ಕೇವಲ 13 ಎಸೆತಗಳಲ್ಲಿ 27 ರನ್ ಸಿಡಿಸುವ ಮೂಲಕ ಉತ್ತಮ ಪೇರಿಸಲು ನೆರವಾದರು.
ವಿದರ್ಭ ತಂಡದ ಪರ ಅಥರ್ವ ತೈಡೆ 32, ಗಣೇಶ್ ಸತೀಷ್ 31, ಅಕ್ಷಯ್ ವಾಡೆಕರ್ 15, ಶುಭಂ ದುಬೆ 24, ಕಾರ್ನೆವರ್ 22, ಅಪೂರ್ವ್ ವಾಂಖಡೆ ಅಜೇಯ 27 ರನ್ ಬಾರಿಸಿದರಾದರೂ ತಂಡವನ್ನು ಗೆಲುವಿನ ದಡ ಸೇರಿಸಲು ವಿಫಲರಾದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಗಾಯಗೊಂಡ ಜಸ್ಪ್ರೀತ್ ಬುಮ್ರಾ IPL ನಿಂದ ಹೊರಗುಳಿಯುವ ಸಾಧ್ಯತೆ!
ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ರೋಹಿತ್ ಶರ್ಮಾ ನಿವೃತ್ತಿ?
ಏಕದಿನ ಕ್ರಿಕೆಟ್ಗೆ ಸ್ಟೀವ್ ಸ್ಮಿತ್ ವಿದಾಯ: ಆಸ್ಟ್ರೇಲಿಯಾ ಬ್ಯಾಟಿಂಗ್ ದಿಗ್ಗಜನ ನಿವೃತ್ತಿ ಘೋಷಣೆ