ಪಾಕಿಸ್ತಾನದ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಶೌರ್ಯ ಪ್ರದರ್ಶನ ತೋರಿದ್ದ ಇಂಡಿಯನ್ ಏರ್ಫೋರ್ಸ್ನ ಈಗಿನ ಗ್ರೂಪ್ ಕ್ಯಾಪ್ಟನ್ ಅಂದಿನ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರಿಗೆ ‘ವೀರ ಚಕ್ರ’ ಪುರಸ್ಕಾರ ಮಾಡಲಾಯಿತು.
ಸೋಮವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿನಂದನ್ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರಶಸ್ತಿ ಪ್ರಧಾನ ಮಾಡಿದರು.
ಬಾಲಾಕೋಟ್ನ ಜೈಷ್ ಉಗ್ರ ನೆಲೆಗಳ ಮೇಲೆ ಭಾರತೀಯ ವಾಯುಪಡೆ ನಡೆಸಿದ ಕೆಚ್ಚೆದೆಯ ವೈಮಾನಿಕ ದಾಳಿ ನಂತರದ ಬೆಳವಣಿಗೆಯಲ್ಲಿ ಪಾಕಿಸ್ತಾನದ ಯುದ್ಧ ವಿಮಾನವನ್ನು ವಿಂಗ್ ಕಮಾಂಡರ್ ಅಭಿನಂದನ್ ಹೊಡೆದುರುಳಿಸಿದ್ದರು.
ಜೊತೆಗೆ ಬಾಲಾಕೋಟ್ ದಾಳಿಯಲ್ಲಿ ಪಾಲ್ಗೊಂಡಿದ್ದ ವಾಯುಪಡೆಯ ಅಮಿತ್ ರಂಜನ್, ರಾಹುಲ್ ಬಸೋಯಾ, ಪಂಕಜ್ ಭುಜಾಡೆ, ಬಿಕೆಎನ್ ರೆಡ್ಡಿ, ಶಶಾಂಕ್ ಸಿಂಗ್ ಸೇರಿದಂತೆ ಐಎಎಫ್ನ 7 ಪೈಲಟ್ಗಳಿಗೆ ಕೂಡಾ’ವಾಯುಸೇನಾ’ ಪದಕ ಪ್ರಕಟಿಸಲಾಗಿದೆ.
ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನ ಹೊಡೆದುರುಳಿಸಿ, ನಂತರ ಶತ್ರುಗಳ ಕೈಗೆ ಆಕಸ್ಮಿಕವಾಗಿ ಸಿಕ್ಕಿಹಾಕಿಕೊಂಡಿದ್ದರು. ಭಾರತದ ಕಠಿಣ ನಿಲುವಿನ ಬಳಿಕ ಅವರು ಅವರು ತಾಯ್ನಾಡಿಗೆ ವಾಪಸ್ ಆಗಿದ್ದರು. ಇತ್ತೀಚಿಗೆ ಅವರಿಗೆ ಭಾರತೀಯ ವಾಯು ಸೇನೆಯಲ್ಲಿ ಗ್ರೂಪ್ ಕ್ಯಾಪ್ಟನ್ ಱಂಕ್ಗೆ ಪ್ರಮೋಷನ್ ನೀಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ