ವಿಧಾನ ಪರಿಷತ್ ಚುನಾವಣೆಯಲ್ಲಿ ಮಂಡ್ಯ ಸಂಸದೆ ಸುಮಲತಾ, ಕಾಂಗ್ರೆಸ್ ಮತ್ತು ಬಿಜೆಪಿಗೆ ಬೆಂಬಲ ನೀಡುವುದಿಲ್ಲ . ತಟಸ್ಥಳಾಗಿರುತ್ತೇನೆ ಎಂದು ಪ್ರಕಟಿಸುವ ಮೂಲಕ ಬಿಗ್ ಶಾಕ್ ನೀಡಿದ್ದಾರೆ.
ನಾನು ಮಂಡ್ಯ ಜನರ ಆಶೀರ್ವಾದದಿಂದ ಈ ಸ್ಥಾನದಲ್ಲಿ ಇದ್ದೇನೆ. ಎಲ್ಲಾ ಪಕ್ಷದವರು ನನಗೆ ಸಪೋರ್ಟ್ ಮಾಡಿದ್ದಾರೆ. ಯಾವುದಾದರು ಒಂದು ಪಕ್ಷಕ್ಕೆ ಬೆಂಬಲ ಕೊಟ್ಟರೆ ಅದು ವಿವಾದ ಸೃಷ್ಟಿಸುತ್ತೆ. ಮಂಡ್ಯ ಜಿಲ್ಲೆಗೆ ಯಾರು ಅಭಿವೃದ್ದಿ ಕೆಲಸ ಮಾಡುತ್ತಾರೊ ಅವರಿಗೆ ವೋಟ್ ಅಂತು ಹಾಕುತ್ತೇನೆ ಎಂದು ಹೇಳಿದರು.
ಯಾರಿಗೂ ಬೆಂಬಲ ನೀಡದೆ ತಟಸ್ಥವಾಗಿರುತ್ತೇನೆ. ಇದು ಚುನಾಯಿತ ಸದಸ್ಯರಿಂದ ನಡೆಯುವ ಚುನಾವಣೆ. ಇದರಲ್ಲಿ ಕ್ಯಾಂಪೇನ್ ಮಾಡುವ ಸಂದರ್ಭ ಬರುವುದಿಲ್ಲ. ಅವರವರ ಅಭ್ಯರ್ಥಿಗಳ ಶಕ್ತಿ ಮೇಲೆ ಎಲ್ಲಾ ಅವಲಂಬಿತವಾಗಿರುತ್ತೆ. ನಾನು ಎಲ್ಲಿಗೂ ಪ್ರಚಾರಕ್ಕೆ ಬರಲ್ಲ, ಖಂಡಿತ ತಟಸ್ಥ. ನನ್ನ ಸಂಪರ್ಕಿಸಿ ಬೆಂಬಲ ಕೇಳಿದವರಿಗೆ ಶುಭಾಶಯವಷ್ಟೆ ಹೇಳುತ್ತೇನೆ ಎಂದು ತಿಳಿಸಿದರು.
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್