ಪೇಜಾವರ ಶ್ರೀ ಕುರಿತು ಹೇಳಿಕೆ ದಾಖಲಿಸಲು ಪೊಲೀಸ್ ಠಾಣೆಗೆ ಭೇಟಿ ಹೇಳಿಕೆ ನೀಡುವ ವೇಳೆ ಮಾಹಾಗುರು, ಸಂಗೀತ ನಿರ್ದೇಶಕ ಹಂಸಲೇಖ ಕಣ್ಣೀರಿಟ್ಟಿದ್ದಾರೆ.
ಬಹಿರಂಗವಾಗಿ ಸಭೆಯಲ್ಲಿ ಶ್ರೀಗಳ ಅಪಚಾರವಾಗುವಂತೆ
ಯಾಕೆ ಹೀಗೆ ಹೇಳಿಕೆ ನೀಡಿದಿರಿ ಎಂಬ ಪ್ರಶ್ನೆಗೆ ಉತ್ತರಿಸಿದ ಹಂಸಲೇಖ ಅವರು, ಯಾಕೆ ಹಾಗೇ ಹೇಳಿದೆನೋ ನಂಗ ಗೊತ್ತೇ ಆಗಲಿಲ್ಲ. ಯಾವ ಉದ್ದೇಶವು ಇರಲಿಲ್ಲ ಎಂದು ಪೋಲಿಸರ ಮುಂದೆ ಹೇಳಿಕೆ ನೀಡಿದರಂತೆ.
ನಾನು ಆ ಸಮಾರಂಭದಲ್ಲಿ
ಮಾತನಾಡುವ ಭರಾಟೆಯಲ್ಲಿ ಹಾಗೆ ಹೇಳಿಬಿಟ್ಟೇ. ನನ್ನ ಹೇಳಿಕೆಗೆ ನನ್ನ ಹೆಂಡತಿಯೇ ಬೇಸರ ವ್ಯಕ್ತಪಡಿಸಿದಳು. ನನ್ನ 70 ವರ್ಷದ ಜೀವನದಲ್ಲಿ ಎಂದಿಗೂ ಹೀಗೆ ಮಾಡಿಕೊಂಡಿರಲಿಲ್ಲಾ. ತಪ್ಪಾಗಿದೆ ಎಂದು ಹೇಳಿದರಂತೆ.
ನನ್ನ ಹೇಳಿಕೆಯಿಂದ ಯಾವ ಧರ್ಮ, ಜಾತಿಯ ನಿಂದಿಸುವ ಉದ್ದೇಶ ಇರಲಿಲ್ಲ ಎಂದು ಹೇಳಿದರಂತೆ.
ಈ ಘಟನೆಯಿಂದ ತನಗೆ ತುಂಬಾ ನೋವಾಗಿದೆ. ನನ್ನ ಕೆಲಸದಲ್ಲೂ ಸೆಟ್ ಬ್ಯಾಕ್ ಆಗಿದೆ. ನಾನು ಈ ಘಟನೆಯಿಂದ ತುಂಬಾ ನೋವು ಅನುಭವಿಸಿದ್ದೇನೆ ಎಂದು ತನಿಖಾಧಿಕಾರಿಗಳ ಮುಂದೆ ಕಣ್ಣೀರಿಟ್ಟರಂತೆ. ನಂತರ ಒಂದೈದು ನಿಮಿಷ ಸುಧಾರಿಸಿಕೊಂಡು ಠಾಣೆಯಿಂದ ಹೊರಟು ಹೋದರು.
ಠಾಣೆಯಿಂದ ಹೊರಡುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ
ಹಂಸಲೇಖ ಅವರು, ಏನು ಇಲ್ಲಮ್ಮ, ಏನು ಇಲ್ಲ ತಾಯಿ, ಎಲ್ಲರಿಗೂ ನಮಸ್ಕಾರ ಎಂದು ಕೈ ಮುಗಿದು ಹೊರಟರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು