ಮಂಡ್ಯ (Mandya) ಸಂಸದೆ ಸುಮಲತಾ, ಮುಂದಿನ ರಾಜಕೀಯ ಭವಿಷ್ಯಕ್ಕಾಗಿ ವಿಧಾನ ಪರಿಷತ್ ಚುನಾವಣೆಯಲ್ಲಿ ಕೈ ಅಭ್ಯರ್ಥಿಗೆ ತಮ್ಮ ಬೆಂಬಲಿಗರ ಮೂಲಕ ಸಾಥ್ ಕೊಟ್ಟು ಬಿಜೆಪಿಗೆ ಬಿಗ್ ಶಾಕ್ ನೀಡಿದ್ದಾರೆ.
ಸಂಸದೆ ಸುಮಲತಾ ಸ್ವಾಭಿಮಾನಿ ಮತ ಪಡೆದು ಮೈತ್ರಿ ಅಭ್ಯರ್ಥಿ ನಿಖಿಲ್ ವಿರುದ್ದ ಗೆದ್ದು ಬೀಗಿದ್ದರು. ಆ ಗೆಲುವಿನ ಹಿಂದೆ ಬಿಜೆಪಿಯ ನೇರ ಬೆಂಬಲ ಇತ್ತು.. ಕಾಂಗ್ರೆಸ್ಸಿಗರ ಪರೋಕ್ಷ ಬೆಂಬಲವಿತ್ತು.. ಅದೇ ಇದೀಗ ಎಂಎಲ್ಸಿ ಚುನಾವಣೆಯಲ್ಲಿ ಸಂಸದೆ ಸುಮಲತಾ ಬೆಂಬಲ ಪಡೆಯಲು ಕೈ-ಕಮಲ ಅಭ್ಯರ್ಥಿಗಳು ಗಿರಕಿ ಹೊಡೆಯುತ್ತಿದ್ದಾರೆ.
ಸುಮಲತಾ ಮಾತ್ರ ನಾನು ತಟಸ್ಥವಾಗಿರುತ್ತೇನೆ.. ಆಶೀರ್ವಾದ ಮಾತ್ರ ಮಾಡ್ತೇನೆ ಎಂದಿದ್ದರು
ಆದರೆ ಈಗ ಬೆಂಬಲಿಗರ ಮೂಲಕ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡಿದ್ದಾರೆ ಎನ್ನುವ ಮಾತು ಕೇಳಿಬರ್ತಿದೆ

ಸಂಸದೆ ಸುಮಲತಾ ಬೆಂಬಲಿಗರ ಬೆಂಬಲದ ಬಲ ಕೈ ಅಭ್ಯರ್ಥಿಯ ಆತ್ಮವಿಶ್ವಾಸ ಹೆಚ್ಚಿಸಿ, ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಸಂಸದ ಸುಮಲತಾ ನಡೆ ಈ ಬಾರಿ ಚುನಾವಣೆಯಲ್ಲಿ ಗೆಲುವಿನ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ ಶಾಕ್ ನೀಡಿದ್ದಾರೆ, ಅತ್ತ ಕಾಂಗ್ರೆಸ್ಗೆ ಫುಲ್ ಖುಷ್ ಆಗಿದೆ. ಇದರ ನಡುವೆ ಜೆಡಿಎಸ್ ಅಭ್ಯರ್ಥಿ ಸೋತರೆ ದಳಪತಿಗಳಿಗೆ ಮುಖಭಂಗ ಎದುರಿಸಬೇಕಾಗುತ್ತೆ.
ಈ ಬೆಂಬಲದ ಹಿಂದೆ ಸಂಸದೆ ಸುಮಲತಾರ ಮುಂದಿನ ರಾಜಕೀಯ ಭವಿಷ್ಯ ಕೂಡ ಅಡಗಿದೆ. ಮಂಡ್ಯದಲ್ಲಿ ದಿನದಿಂದ ದಿನಕ್ಕೆ ಜೆಡಿಎಸ್ ವೀಕ್ ಆಗ್ತಿದೆ. ಮುಂದೆ ಕಾಂಗ್ರೆಸ್ ಸೇರಿದರೆ ಅವಕಾಶಗಳು ಸಿಗುತ್ತೆ, ಅಧಿಕಾರವು ದಕ್ಕುತ್ತೆ ಅನ್ನೋ ಅಭಿಪ್ರಾಯ ಹೊಂದಿದ್ದಾರೆ. ಈ ಚುನಾವಣೆಯಲ್ಲಿ ಜೆಡಿಎಸ್ ಸೋಲಿಸಿದ್ರೆ ದಳಪತಿಗಳಿಗೆ ಮುಖಭಂಗವು ಆಗುತ್ತೆ ಎಂಬ ತಂತ್ರ ಅಡಗಿದೆ. ಆದ್ರೆ ಈ ತಂತ್ರಗಾರಿಕೆಯ ಭಾಗವಾಗಿ ಬಿಜೆಪಿಗೆ ಶಾಕ್ ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ