February 20, 2026

Newsnap Kannada

The World at your finger tips!

bjp congras

ಮಂಡ್ಯದಲ್ಲಿ ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ ಸುಮಲತಾ ಬೆಂಬಲಿಗರು : ಬಿಜೆಪಿಗೆ ಬಿಗ್ ಶಾಕ್

Spread the love

ಮಂಡ್ಯ (Mandya) ಸಂಸದೆ ಸುಮಲತಾ, ಮುಂದಿನ ರಾಜಕೀಯ ಭವಿಷ್ಯಕ್ಕಾಗಿ ವಿಧಾನ ಪರಿಷತ್ ಚುನಾವಣೆಯಲ್ಲಿ ಕೈ ಅಭ್ಯರ್ಥಿಗೆ ತಮ್ಮ ಬೆಂಬಲಿಗರ ಮೂಲಕ ಸಾಥ್ ಕೊಟ್ಟು ಬಿಜೆಪಿಗೆ ಬಿಗ್ ಶಾಕ್ ನೀಡಿದ್ದಾರೆ.

ಸಂಸದೆ ಸುಮಲತಾ ಸ್ವಾಭಿಮಾನಿ ಮತ ಪಡೆದು ಮೈತ್ರಿ ಅಭ್ಯರ್ಥಿ ನಿಖಿಲ್ ವಿರುದ್ದ ಗೆದ್ದು ಬೀಗಿದ್ದರು. ಆ ಗೆಲುವಿನ ಹಿಂದೆ ಬಿಜೆಪಿಯ ನೇರ ಬೆಂಬಲ ಇತ್ತು.. ಕಾಂಗ್ರೆಸ್ಸಿಗರ ಪರೋಕ್ಷ ಬೆಂಬಲವಿತ್ತು.. ಅದೇ ಇದೀಗ ಎಂಎಲ್ಸಿ ಚುನಾವಣೆಯಲ್ಲಿ ಸಂಸದೆ ಸುಮಲತಾ ಬೆಂಬಲ ಪಡೆಯಲು ಕೈ-ಕಮಲ ಅಭ್ಯರ್ಥಿಗಳು ಗಿರಕಿ ಹೊಡೆಯುತ್ತಿದ್ದಾರೆ.
ಸುಮಲತಾ ಮಾತ್ರ ನಾನು ತಟಸ್ಥವಾಗಿರುತ್ತೇನೆ.. ಆಶೀರ್ವಾದ ಮಾತ್ರ ಮಾಡ್ತೇನೆ ಎಂದಿದ್ದರು

ಆದರೆ ಈಗ ಬೆಂಬಲಿಗರ ಮೂಲಕ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡಿದ್ದಾರೆ ಎನ್ನುವ ಮಾತು ಕೇಳಿಬರ್ತಿದೆ

sumalatha1

ಸಂಸದೆ ಸುಮಲತಾ ಬೆಂಬಲಿಗರ ಬೆಂಬಲದ ಬಲ ಕೈ ಅಭ್ಯರ್ಥಿಯ ಆತ್ಮವಿಶ್ವಾಸ ಹೆಚ್ಚಿಸಿ, ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಸಂಸದ ಸುಮಲತಾ ನಡೆ ಈ ಬಾರಿ ಚುನಾವಣೆಯಲ್ಲಿ ಗೆಲುವಿನ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ ಶಾಕ್ ನೀಡಿದ್ದಾರೆ, ಅತ್ತ ಕಾಂಗ್ರೆಸ್​ಗೆ ಫುಲ್ ಖುಷ್ ಆಗಿದೆ. ಇದರ ನಡುವೆ ಜೆಡಿಎಸ್ ಅಭ್ಯರ್ಥಿ ಸೋತರೆ ದಳಪತಿಗಳಿಗೆ ಮುಖಭಂಗ ಎದುರಿಸಬೇಕಾಗುತ್ತೆ.

ಈ ಬೆಂಬಲದ ಹಿಂದೆ ಸಂಸದೆ ಸುಮಲತಾರ ಮುಂದಿನ ರಾಜಕೀಯ ಭವಿಷ್ಯ ಕೂಡ ಅಡಗಿದೆ. ಮಂಡ್ಯದಲ್ಲಿ ದಿನದಿಂದ ದಿನಕ್ಕೆ ಜೆಡಿಎಸ್ ವೀಕ್ ಆಗ್ತಿದೆ. ಮುಂದೆ ಕಾಂಗ್ರೆಸ್ ಸೇರಿದರೆ ಅವಕಾಶಗಳು ಸಿಗುತ್ತೆ, ಅಧಿಕಾರವು ದಕ್ಕುತ್ತೆ ಅನ್ನೋ ಅಭಿಪ್ರಾಯ ಹೊಂದಿದ್ದಾರೆ. ಈ ಚುನಾವಣೆಯಲ್ಲಿ ಜೆಡಿಎಸ್ ಸೋಲಿಸಿದ್ರೆ ದಳಪತಿಗಳಿಗೆ ಮುಖಭಂಗವು ಆಗುತ್ತೆ ಎಂಬ ತಂತ್ರ ಅಡಗಿದೆ. ಆದ್ರೆ ಈ ತಂತ್ರಗಾರಿಕೆಯ ಭಾಗವಾಗಿ ಬಿಜೆಪಿಗೆ ಶಾಕ್ ನೀಡಿದ್ದಾರೆ.

error: Content is protected !!