ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ತಿರುಪತಿಯಿಂದ ತಿರುಮಲಕ್ಕೆ ಹೋಗುವ ರಸ್ತೆ ಮೇಲೆ ಬಂಡೆಗಲ್ಲು ಉರುಳಿ ಬಿದ್ದಿದೆ.
ರಸ್ತೆಗೆ ಸಂಪೂರ್ಣ ಹಾನಿಯಾಗಿದೆ, ತಾತ್ಕಾಲಿಕವಾಗಿ ತಿರುಪತಿ ತಿಮ್ಮಪನ ದರ್ಶನ ರದ್ದಾಗಿದೆ.
ತಿರುಮಲಕ್ಕೆ ಹೋಗುವ ಎರಡನೇ ಘಾಟ್ ರಸ್ತೆಯಲ್ಲಿ ಅಂದರೆ ತಿಮ್ಮಪ್ಪ ದೇಗಲದಿಂದ ಸುಮಾರು 16ನೇ ಕಿ.ಮೀ ದೂರದಲ್ಲಿ ಭೂಕುಸಿತ ಉಂಟಾಗಿದೆ.
ಮಳೆಯಿಂದಾಗಿ ಬೃಹತ್ ಕಲ್ಲುಬಂಡೆಗಳು ರಸ್ತೆಗೆ ಉರುಳಿ ಬಿದ್ದಿದ್ದರಿಂದ ಕುಸಿತಗೊಂಡಿದೆ. ಮೂರು ಕಡೆ ರಸ್ತೆ ಭಾಗಶಃ ಹಾಳಾಗಿದೆ.
ಇಂದು ಮುಂಜಾನೆ 4 ಗಂಟೆ ಸುಮಾರಿಗೆ ರಸ್ತೆ ಕುಸಿತಗೊಂಡಿದೆ ಮುಂಜಾಗ್ರತಾ ಕ್ರಮವಾಗಿ ರಸ್ತೆಯಲ್ಲಿನ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಎರಡನೇ ಘಾಟ್ ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಿಸಲಾಗಿದೆ.
ಜೊತೆಗೆ ವಾಹನಗಳು ಮೊದಲ ಘಾಟ್ ಮೂಲಕ ತಿಮ್ಮಪ್ಪನ ಸನ್ನಿಧಿಗೆ ಬರುವಂತೆ ಸೂಚಿಸಲಾಗಿದೆ.
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ